ಅಡ್ಕಾರ್ ನಲ್ಲಿ ಕಾರು- ಲಾರಿ ಮಧ್ಯೆ ಅಪಘಾತ

Update: 2019-10-17 17:23 GMT

ಸುಳ್ಯ: ಕೆಲವು ದಿನಗಳ ಹಿಂದೆ ಸರಣಿ ಅಪಘಾತದಿಂದಾಗಿ ಏಳು ಜೀವಗಳು ಬಲಿಯಾಗಿದ್ದ ರಾಷ್ಟ್ರೀಯ ಹೆದ್ದಾರಿ 275ರ ಸುಳ್ಯ ಸಮೀಪದ ಆಡ್ಕಾರ್ ಮಾವಿನಕಟ್ಟೆಯಲ್ಲಿ ಗುರುವಾರ ರಾತ್ರಿ ಮತ್ತೆ ಅಪಘಾತ ನಡೆದಿದೆ. 

ಕಾರು ಮತ್ತು ಲಾರಿ ನಡುವಿನ ಅಪಘಾತ ಉಂಟಾಗಿ ಕಾರು ನುಜ್ಜು ಗುಜ್ಜಾಗಿದೆ.  ಸುಳ್ಯ ಕಡೆಯಿಂದ ಕಾಸರಗೋಡು ಕಡೆಗೆ ಹೋಗುತ್ತಿದ್ದ ಕಾರು ಮತ್ತು ಸುಳ್ಯ ಕಡೆಗೆ ಬರುತ್ತಿದ್ದ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಯಾರಿಗೂ ಅಪಾಯ ಸಂಭವಿಸಿಲ್ಲ. ಅಡ್ಕಾರ್ ನಲ್ಲಿ ಕಳೆದ 15 ದಿನದಲ್ಲಿ ಉಂಟಾದ ಎರಡು ಪ್ರತ್ಯೇಕ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದರು. ಬಳಿಕ ಅಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದರೂ ಮತ್ತೆ ಅಪಘಾತ ಸಂಭವಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News