ಸೌದಿಯಲ್ಲಿ ರಸ್ತೆ ಅಪಘಾತ: ಪಡುಬಿದ್ರೆಯ ಯುವಕ ಮೃತ್ಯು

Update: 2019-10-18 05:59 GMT

ಪಡುಬಿದ್ರೆ : ಸೌದಿಯಲ್ಲಿ ನಡೆದ ಅಪಘಾತವೊಂದರಲ್ಲಿ ಪಡುಬಿದ್ರೆಯ ಯುವಕನೋರ್ವ ಮೃತಪಟ್ಟಿದ್ದಾರೆ.

ಪಡುಬಿದ್ರೆಯ ಕಂಚಿನಡ್ಕ ನಿವಾಸಿ ಹಂಝ ಎಂಬವರ ಪುತ್ರ ಅಬ್ದುಲ್ ಖಾದರ್ (35) ಮೃತರು ಎಂದು ಗುರುತಿಸಲಾಗಿದೆ.

ಅವರು ಸೌದಿಯಲ್ಲಿ ವ್ಯಾಪಾರ ಮಾಡಿಕೊಂಡಿದ್ದು, ಕಾರಿನಲ್ಲಿ ಪ್ರಯಾಣಿಸುತಿದ್ದಾಗ ಹೈಲ್‌ನ 180 ಕಿಮೀ ದೂರದಲ್ಲಿ ಕಾರಿನ ಟಯರ್ ಸ್ಪೋಟಗೊಂಡು ಅಪಘಾತ ಸಂಭವಿಸಿತ್ತು. ತೀವ್ರಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತರು ತಂದೆ, ಪತ್ನಿ, ಇಬ್ಬರು ಪುತ್ರರು, ಮೂವರು ಸಹೋದರರನ್ನು ಅಗಲಿದ್ದಾರೆ. ಮೃತದೇಹವನ್ನು ಸೌದಿಯಲ್ಲಿಯೇ ಅಂತ್ಯಕ್ರಿಯೆ ನಡೆಸುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News