ನಳಿನ್ ಕುಮಾರ್ ಗೆ ರಾಜ್ಯದ ಬಗ್ಗೆ ಏನೂ ಗೊತ್ತಿಲ್ಲ: ಸಿದ್ದರಾಮಯ್ಯ

Update: 2019-10-18 09:55 GMT

ಮಂಗಳೂರು: ನಳಿನ್ ಕುಮಾರ್‌ ಅವರ ಕರ್ನಾಟಕದಲ್ಲಿ 34 ಜಿಲ್ಲೆ ಇದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಳಿನ್ ಕುಮಾರ್ ಕಟೀಲು ಅವರಿಗೆ ರಾಜ್ಯ ಬಗ್ಗೆ ಏನೂ ಗೊತ್ತಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ನಳಿನ್ ಅವರಿಗೆ ಮಂಗಳೂರು ಮಾತ್ರ ಗೊತ್ತು, ಮಂಗಳೂರು ಬಿಟ್ಟು ಅವರಿಗೆ ಏನೂ ಗೊತ್ತಿಲ್ಲ, ಅವರಿಗೆ ಕನಿಷ್ಟ ಜ್ಞಾನ ಕೂಡ ಇಲ್ಲ ಎಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತ ಸಿದ್ದರಾಮಯ್ಯ ಹೇಳಿದರು.

ನಂತರ ಮಾತನಾಡಿದ ಅವರು ಕಾವೇರಿ ಅತಿಥಿ ಗೃಹವನ್ನು ನಾನು ಕೇಳಿದ್ದೇನೆ ಅದು ನೀಡುವುದು ಸರಕಾರಕ್ಕೆ ಬಿಟ್ಟ ವಿಚಾರ ಎಂದು ಹೇಳಿದರು. ಸಮ್ಮಿಶ್ರ ಸರಕಾರ ಇದ್ದಾಗ ಜಾರ್ಜ್ ಅವರಿಗೆ ಇದ್ದ ಕಾವೇರಿ ಗೆಸ್ಟ್ ಹೌಸ್ ನನಗೆ ಬಿಟ್ಟು ಕೊಟ್ಟಿದ್ದರು ಎಂದು ನೆನಪಿಸಿದರು. ಬಿಜೆಪಿ ಸರಕಾರವನ್ನು ಯಾರು ಕೇಳುವವರು, ಹೇಳುವವರು ಇಲ್ಲ. ಸರಕಾರದಿಂದ ವರ್ಗಾವಣೆ ದಂಧೆಯಾಗುತ್ತಿದೆ ಅಷ್ಟೇ, ಬೇರೆ ಏನು ಪ್ರಗತಿ ಆಗುತ್ತಿಲ್ಲ. ಪ್ರವಾಹ ಬಂದಿರುವಲ್ಲಿ ಸರಿಯಾಗಿ ಕೆಲಸ ಆಗುತ್ತಿಲ್ಲ, ಎಲ್ಲರೂ ಮಹಾರಾಷ್ಟ್ರ ಮನೆಯಲ್ಲಿ ನೆಮ್ಮದಿಯಾಗಿ ಇದ್ದಾರೆ. ಸರಕಾರ ಸಂಪೂರ್ಣ ಹದಗೆಟ್ಟು ಹೋಗಿದೆ. ಬಿಜೆಪಿಗೆ ಅಪರೇಷನ್ ಕಮಲ ಬಿಟ್ಟು ಬೇರೆ ವಿಚಾರ ಇಲ್ಲ. ನಮ್ಮವರನ್ನು ಹಣ ಕೊಟ್ಟು ಖರೀದಿ ಮಾಡುತ್ತಾರೆ. ಆಪರೇಷನ್ ಮಾಡಲು ನಮ್ಮ ತೆರಿಗೆ ಹಣ ವ್ಯಯ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News