ಪಕ್ಷದ ನಾಯಕರ ವಿರುದ್ಧ ಹೇಳಿಕೆ: ಕೋಲಾರ ಕಾಂಗ್ರೆಸ್ ಜಿಲ್ಲಾಧ್ಯಕ್ಷ, ಏಳು ಪದಾಧಿಕಾರಿಗಳ ಅಮಾನತು

Update: 2019-10-18 14:35 GMT

ಬೆಂಗಳೂರು, ಅ. 18: ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಆಧಾರರಹಿತ ಆರೋಪ ಮಾಡುವ ಮೂಲಕ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಕೋಲಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು ಸೇರಿದಂತೆ ಏಳು ಮಂದಿ ಪದಾಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಕಾಂಗ್ರೆಸ್ ಮುಖಂಡರ ವಿರುದ್ಧ ಸುದ್ಧಿಗೋಷ್ಠಿ ನಡೆಸಿದ ಮಾಜಿ ಕಾರ್ಯದರ್ಶಿ ಕುಮಾರ್, ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅತಾವುಲ್ಲಾ, ಅಲ್ಪಸಂಖ್ಯಾತರ ವಿಭಾಗದ ಉಪಾಧ್ಯಕ್ಷ ಇಕ್ಬಾಲ್ ಅಹ್ಮದ್, ಎಸ್ಸಿ ವಿಭಾಗದ ಜಿಲ್ಲಾಧ್ಯಕ್ಷ ಕೆ.ಜಯದೇವ, ಎಸ್ಟಿ ವಿಭಾಗದ ಜಿಲ್ಲಾಧ್ಯಕ್ಷ ನಾಗರಾಜ್ ಹಾಗೂ ಎಲ್.ಕಲೀಲ್ ಅವರನ್ನು ಅಮಾನತು ಮಾಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ.ಘೋರ್ಪಡೆ ಈ ಸಂಬಂಧ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News