ಯುವ ಸ್ಪಂದನ ಕೇಂದ್ರ ಮಾಹಿತಿ ಶಿಬಿರ
Update: 2019-10-18 16:41 GMT
ಉಡುಪಿ, ಅ.18:ಕೊಕ್ಕರ್ಣೆ ಸರಕಾರಿ ಕೈಗಾರಿಕಾ ತರಬೇತಿ ಕೇಂದದಲ್ಲಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಯುವ ಸ್ಪಂದನ ಕೇಂದ್ರದ ಕುರಿತು ಮಾಹಿತಿ ಶಿಬಿರ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಯುವ ಸ್ಪಂದನ ಕೇಂದ್ರದ ಯುವ ಪರಿವರ್ತಕ ಗಣೇಶ್ ಕೊಕ್ಕರ್ಣೆ, ವಿದ್ಯಾರ್ಥಿಗಳಿಗೆ ಆರೋಗ್ಯ ಮತ್ತು ಜೀವನ ಶೈಲಿ, ವ್ಯಕ್ತಿತ್ವ ಬೆಳವಣಿಗೆ ಹಾಗೂ ಸುರಕ್ಷತೆಯ ಕುರಿತು ಮಾಹಿತಿ ನೀಡಿದರು.