ಉದ್ಯಾವರ ಫ್ರೆಂಡ್ಸ್ ಸರ್ಕಲ್ ಅಧ್ಯಕ್ಷರಾಗಿ ತಿಲಕ್‌ರಾಜ್ ಸಾಲ್ಯಾನ್ ಪುನರಾಯ್ಕೆ

Update: 2019-10-19 14:04 GMT

ಉದ್ಯಾವರ, ಅ.19: ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲ್ ಇದರ 2019-20ರ ಸಾಲಿನ ಅಧ್ಯಕ್ಷರಾಗಿ ತಿಲಕ್‌ರಾ್ ಸಾಲ್ಯಾನ್ ಪುನರಾಯ್ಕೆಗೊಂಡಿದ್ದಾರೆ.

ಗೌರವ ಅಧ್ಯಕ್ಷರಾಗಿ ಮಾಜಿ ಕೇಂದ್ರ ಸಚಿವ ಹಾಗೂ ರಾಜ್ಯಸಭಾ ಸದಸ್ಯ ರಾಗಿರುವ ಆಸ್ಕರ್ ಫೆರ್ನಾಂಡಿಸ್ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಗಿರೀಶ್ ಗು್ಡೆಯಂಗಡಿ ಮರು ಆಯ್ಕೆಗೊಂಡಿದ್ದಾರೆ.

ಇನ್ನಿತರ ಪದಾಧಿಕಾರಿಗಳ ವಿವರ ಈ ಕೆಳಗಿನಂತಿದೆ.

ಉಪಾಧ್ಯಕ್ಷರು:ಸುಗಂಧಿ ಶೇಖರ್, ಲೋಕನಾಥ ಬೊಳ್ಜೆ, ಕಾರ್ಯದರ್ಶಿ ಗಳು:ಯು.ಆರ್. ಚಂದ್ರಶೇಖರ್, ರಮೇಶ್ ಕುಮಾರ್ ಉದ್ಯಾವರ, ಕೋಶಾಧಿಕಾರಿ: ಸೋಮಶೇಖರ್ ಸುರತ್ಕಲ್, ಸಾಂಸ್ಕೃತಿಕ ಕಾರ್ಯದರ್ಶಿ: ಶ್ರೀಧರ ಗಣೇಶ್ ನಗರ, ಸಂಘಟನಾ ಕಾರ್ಯದರ್ಶಿಗಳು: ಸತೀಶ್ ಡಿ. ಸಾಲ್ಯಾನ್, ಅಬ್ದುಲ್ ಹಮೀದ್ ಸಾಬ್ಜಾನ್, ಆಂತರಿಕ ಲೆಕ್ಕಪರಿಶೊಧಕರು: ಹಬೀಬ್ ಪಳ್ಳಿ, ನಿರ್ದೇಶಕರು: ಅಬ್ದುಲ್ ಜಲೀಲ್ ಸಾಹೇಬ್, ಮಹಮ್ಮದ್ ನಯಾಜ್, ಜಾರ್ಜ್ ಮಿನೇಜಸ್, ಯು. ಪಧ್ಮನಾಭ ಕಾಮತ್, ಚಂದ್ರಾವತಿ ಎಸ್. ಭಂಡಾರಿ, ಶರತ್ ಕುಮಾರ್, ಉದ್ಯಾವರ ನಾಗೇಶ್ ಕುಮಾರ್.

ಸಂಸ್ಥೆಯ 46ನೇ ಮಹಾಸಭೆಯು ಅಧ್ಯಕ್ಷ ತಿಲಕ್‌ರಾಜ್ ಸಾಲ್ಯಾನ್ ಅಧ್ಯಕ್ಷತೆ ಯಲ್ಲಿ ಜರಗಿತು. ಪ್ರಧಾನ ಕಾರ್ಯದರ್ಶಿ ಗಿರೀಶ್ ಗುಡ್ಡೆಯಂಗಡಿ ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ ಸೋಮಶೇಖರ್ ಸುರತ್ಕಲ್ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಪ್ರಧಾನ ಕಾರ್ಯದರ್ಶಿ ಗಿರೀಶ್ ಗುಡ್ಡೆಯಂಗಡಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News