ಉಡುಪಿ: ವಾರಸುದಾರರಿಗೆ ಸೂಚನೆ

Update: 2019-10-19 14:52 GMT

ಉಡುಪಿ, ಅ.19: ಉಡುಪಿ ರೈಲ್ವೇ ಸ್ಟೇಷನ್ ಎದುರುಗಡೆ ಇರುವ ರಾಮಕೃಷ್ಣ ಇನ್‌ಸ್ಟಿಟ್ಯೂಟ್ ಕಟ್ಟಡದ ಬಳಿ ಕಳೆದ ಸೆ.14ರಂದು ಅಸ್ವಸ್ಥರಾಗಿ ಬಿದ್ದಿದ್ದ ಅಪರಿಚಿತ ಪುರುಷರೊಬ್ಬರನ್ನು (ಸುಮಾರು 50 ವರ್ಷ) ಚಿಕಿತ್ಸೆಗಾಗಿ ಅಜ್ಜರಕಾಡು ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಯಲ್ಲಿರುಾಗಲೇ ಅವರು ಮೃತಪಟ್ಟಿದ್ದಾರೆ.

ಮೃತ ಅಪರಿಚಿತ ವ್ಯಕ್ತಿಯ ವಾರಸುದಾರರೂ ಯಾರಾದರೂ ಇದ್ದಲ್ಲಿ ಮಣಿಪಾಲ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 0820-2570328, 9480805448 ಅಥವಾ ಉಡುಪಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಮ್ ನಂಬರ್:0820-2526444ನ್ನು ಸಂಪರ್ಕಿಸುವಂತೆ ಮಣಿಪಾಲ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಉಡುಪಿ:  ಜಿಲ್ಲಾ ಆಸ್ಪತ್ರೆ ಉಡುಪಿಯಲ್ಲಿ ಒಳರೋಗಿಯಾದ ದಾಖಲಾದ ಗೋಪಾಲ (65) ಎಂಬ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದ್ದು,ಅವರ ವಾರಸುದಾರರು ಯಾರಾದರು ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0820-2520555/9449827833ನ್ನು ಸಂಪರ್ಕಿಸುವಂತೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್‌ರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News