ಅ.14ರಂದು ರಾಷ್ಟ್ರಮಟ್ಟದ ಪ್ರಾಜೆಕ್ಟ್ ಪ್ರದರ್ಶನ

Update: 2019-10-19 16:14 GMT

ಶಿರ್ವ, ಅ.19: ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ರಾಷ್ಟ್ರಮಟ್ಟದ ಪ್ರಾಜೆಕ್ಟ್ ಪ್ರದರ್ಶನ ಮತು್ತ ಸ್ಪರ್ಧೆ ಅ.24 ರಂದು ನಡೆಯಲಿದೆ.

 ಕಾರ್ಯಕ್ರಮವನ್ನು ಸಂಸ್ಥೆಯ ಸ್ಥಾಪಕಾಧ್ಯಕ್ಷ, ಉಡುಪಿ ಸೋದೆ ಮಠಾಧೀಶ ಶ್ರೀವಿಶ್ವವಲ್ಲಭ ತೀರ್ಥ ಸ್ವಾಮೀಜಿ ಉದ್ಘಾಟಿಸಲಿರುವರು. ಬೆಂಗಳೂರಿನ ಟೆಕ್ಸಾಸ್ ಇಂಸ್ಟ್ರುಮೆಂಟ್ಸ್ ಕಂಪನಿಯ ನಿರ್ದೇಶಕ ಡಾ.ಸಿ.ಪಿ.ರವಿಕುಮಾರ್ ಭಾಗವಹಿಸಲಿರುವರು. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸುರತ್ಕಲ್ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯದ ಉಪನಿರ್ದೇಶಕ ಡಾ. ಅನಂತನಾರಾಯಣ ವಿ.ಎಸ್. ವಿಜೇತರಿಗೆ ಬಹುಮಾನ ವಿತರಿಸಲಿರುವರು. ಸುಮಾರು 40ಕ್ಕೂ ಹೆಚ್ಚು ಪ್ರಾಜೆಕ್ಟ್‌ಗಳು ಪ್ರದರ್ಶನಗೊಳ್ಳಲಿವೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News