ಕಾರು ಢಿಕ್ಕಿ: ರಿಕ್ಷಾ ಚಾಲಕ ಮೃತ್ಯು

Update: 2019-10-19 16:18 GMT

ಕಾಪು, ಅ.19: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಿಂತಿದ್ದ ರಿಕ್ಷಾ ಚಾಲಕರೊಬ್ಬರು ಮೃತಪಟ್ಟ ಘಟನೆ ಉಳಿಯಾರಗೋಳಿ ಗ್ರಾಮದ ದೇಸಿಕ್ರೋ ಕಾಲ್ ಸೆಂಟರ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅ.18ರಂದು ಸಂಜೆ 7:30ರ ಸುಮಾರಿಗೆ ನಡೆದಿದೆ

ಮೃತರನ್ನು ಉಳಿಯಾರಗೋಳಿ ಯಾರ್ಡ್ ನಿವಾಸಿ ಲತೀಶ್ ಮೆಂಡನ್ (38) ಎಂದು ಗುರುತಿಸಲಾಗಿದೆ. ಇವರ ರಿಕ್ಷಾ ರಸ್ತೆ ಬದಿ ಕೆಟ್ಟು ನಿಂತಿದ್ದು, ರಿಕ್ಷಾದಿಂದ ಇಳಿದ ಲತೀಶ್ ರಸ್ತೆ ದಾಟಿ ಮಣ್ಣು ರಸ್ತೆಯಲ್ಲಿ ನಿಂತಿದ್ದರು. ಆಗ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಲತೀಶ್ ಮೆಂಡನ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಲತೀಶ್ ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಅಪಘಾತ ನಡೆಸಿದ ಚಾಲಕ ಕಾರನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News