ಅ.21: ಕಂದಾಯ ಸಚಿವರ ದ.ಕ. ಜಿಲ್ಲಾ ಜಿಲ್ಲಾ ಪ್ರವಾಸ

Update: 2019-10-19 16:30 GMT

ಮಂಗಳೂರು, ಅ.19: ಕಂದಾಯ ಮತ್ತು ಪೌರಾಡಳಿತ ಸಚಿವ ಆರ್.ಅಶೋಕ್ ಅ.21ರಂದು ದ.ಕ. ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಅಂದು ಬೆಳಗ್ಗೆ 10:30ಕ್ಕೆ ಬಂಟ್ವಾಳ ರಸ್ತೆಗಳ ಸೌಂದರೀಕರಣ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮ, ಬೆಳಗ್ಗೆ 11 ಗಂಟೆಗೆ ಬಂಟ್ವಾಳ ತಾಲೂಕು 94 ಸಿ ಮತ್ತು 94 ಸಿಸಿ ಹಕ್ಕುಪತ್ರ ವಿತರಣಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಲಾಖಾ ಪ್ರಗತಿ ಪರಿಶೀಲನಾ ಸಭೆ ನಡೆಸಿ, ರಾತ್ರಿ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News