ಸರಣಿ ಅಪಘಾತ: ಇಬ್ಬರು ಬೈಕ್ ಸವಾರರು ಮೃತ್ಯು

Update: 2019-10-19 17:17 GMT

ಮಂಡ್ಯ, ಅ.19: ಎರಡು ಬೈಕ್ ಗಳು ಮತ್ತು ಟಿಪ್ಪರ್ ನಡುವೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಮುರುಕನಹಳ್ಳಿ ಬಳಿ ನಡೆದಿದೆ.

ಕೆ.ಆರ್.ಪೇಟೆ ತಾಲೂಕು ಪುರ ಗ್ರಾಮದ ಕೃಷ್ಣೇಗೌಡರ ಪತ್ನಿ ಸುಲೋಚನ(26) ಹಾಗು ಮಂಡ್ಯ ತಾಲೂಕು ದುದ್ದ ಹೋಬಳಿ ಹೊನ್ನೇನಹಳ್ಳಿ ಗ್ರಾಮದ ಕುಮಾರ್(26) ಎಂಬವರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಕೃಷ್ಣೇಗೌಡ ದಂಪತಿ ಮರಡಹಳ್ಳಿ ಗ್ರಾಮದಿಂದ ಬೈಕ್‍ನಲ್ಲಿ ತಮ್ಮ ಊರಿಗೆ ತೆರಳುತ್ತಿದ್ದ ವೇಳೆ ಎದುರುಗಡೆಯಿಂದ ಬರುತ್ತಿದ್ದ ಕುಮಾರ್ ಅವರ ಬೈಕಿನ ನಡುವೆ ಮುಖಾಮುಕಿ ಢಿಕ್ಕಿ ಸಂಭವಿಸಿದೆ. ಬೈಕ್ ಹಿಂದೆ ಕುಳಿತಿದ್ದ ಸುಲೋಚನ ರಸ್ತೆಗೆ ಬಿದ್ದಾಗ ಹಿಂದಿನಿಂದ ಬರುತ್ತಿದ್ದ ಟಿಪ್ಪರ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.  

ಮತ್ತೊಂದು ಬೈಕಿನ ಕುಮಾರ ಎಂಬವರು ಗಂಭೀರ ಗಾಯಗೊಂಡರು. ಕೂಡಲೇ ಅವರನ್ನು ಮೈಸೂರಿನ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಮಾರ್ಗಮಧ್ಯೆ ಅವರು ಸಾವನ್ನಪ್ಪಿದರು ಎಂದು ಕೆ.ಆರ್.ಪೇಟೆ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News