ಎಸ್‌ಬಿಐ ಬ್ಯಾಂಕ್‌ ಅಧಿಕಾರಿ ಆತ್ಮಹತ್ಯೆ

Update: 2019-10-19 17:27 GMT

ಶಿವಮೊಗ್ಗ, ಅ.19: ಸಾಗರ ತಾಲೂಕಿನ ಜೋಗಫಾಲ್ಸ್ ಎಸ್‌ಬಿಐ ಶಾಖೆಯ ಡೆಪ್ಯೂಟಿ ಮ್ಯಾನೇಜರ್ ಅನಿಲ್ ಕುಮಾರ್(30) ಎಂಬವರು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ವರದಿಯಾಗಿದೆ.

ಎರಡು ದಿನದಿಂದ ರಜೆಯಲ್ಲಿದ್ದ ಅನಿಲ್ ಕುಮಾರ್ ಎಂದಿನಂತೆ ಶನಿವಾರ ಬೆಳಗ್ಗೆ ಬ್ಯಾಂಕ್‌ಗೆ ಹೋಗಿದ್ದರು. ಸ್ವಲ್ಪ ಸಮಯದ ಬಳಿಕ ಮನೆಗೆ ಹಿಂದಿರುಗಿ, ಪತ್ನಿಯನ್ನು ಹೊರಗೆ ಕಳುಹಿಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕೆಲಸದ ಒತ್ತಡ ಅಥವಾ ಕೌಟುಂಬಿಕ ಕಲಹವೇ ಅವರ ಆತ್ಮಹತ್ಯೆಗೆ ಕಾರಣ ಎಂಬ ಮಾತುಗಳು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿವೆ.
ಈ ಕುರಿತು ಜೋಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News