ಪುತ್ತೂರು: ಮನೆಗೆ ನುಗ್ಗಿ ಕಳ್ಳತನ

Update: 2019-10-20 11:36 GMT

ಪುತ್ತೂರು:ಮನೆಯಲ್ಲಿ ಯಾರೂ ಇಲ್ಲದೆ ವೇಳೆಯಲ್ಲಿ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ನಗ ನಗದು ಕಳವು ನಡೆಸಿದ ಘಟನೆ ಪುತ್ತೂರು ತಾಲೂಕಿನ ಸಾಲ್ಮರ ಮುದ್ದೋಡಿ ಎಂಬಲ್ಲಿ ನಡೆದಿದೆ.

ಇಲ್ಲಿನ ಝೊಹರಾ ಎಂಬವರ ಮನೆಯಿಂದ ಕಳ್ಳತನ ನಡೆದಿದ್ದು, ಝೊಹರಾ ಅವರು ತನ್ನ ಪುತ್ರರು ಹಾಗೂ ಸೊಸೆಯಂದಿರೊಂದಿಗೆ ಅ.17ರಂದು ತನ್ನ ಸಂಬಂಧಿಕರ ಮನೆಗೆ ತೆರಳಿದ್ದರು ಎನ್ನಲಾಗಿದ್ದು, ಶನಿವಾರ ಸಂಜೆ ಮನೆಗೆ ಹಿಂದುರಿಗಿದ ವೇಳೆಯಲ್ಲಿ ಕಳವು ಘಟನೆ ಬೆಳಕಿಗೆ ಬಂದಿದೆ. 

ಕಳ್ಳರು ಮನೆಯೊಳಗಿದ್ದ ಕಪಾಟಿನ ಬೀಗ ಒಡೆದು ಅದರಲ್ಲಿದ್ದ 3 ಪವನ್ ತೂಕದ ಚಿನ್ನದ ಕರಿಮಣಿ ಸರ, 3 ವಾಚ್ ಮತ್ತು ಸಾವಿರಾರು ರೂಪಾಯಿ ನಗದು ಕಳವು ನಡೆಸಿದ್ದಾರೆ. 

ಘಟನೆಯ ಕುರಿತು ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News