ಮನಪಾ ಚುನಾವಣೆ: ಸದಸ್ಯರಿಂದ ಅರ್ಜಿ ಆಹ್ವಾನಿಸಿದ ಕಾಂಗ್ರೆಸ್

Update: 2019-10-20 14:49 GMT

ಮಂಗಳೂರು, ಅ.20: ಮಂಗಳೂರು ಮಹಾನಗರ ಪಾಲಿಕೆಯ 60 ವಾರ್ಡ್‌ಗಳಿಗೆ ರಾಜ್ಯ ಚುನಾವಣಾ ಆಯೋಗವು ಚುನಾವಣಾ ದಿನಾಂಕ ಘೋಷಿಸಲಾಗಿದ್ದು, ಆಯಾ ವಾರ್ಡ್‌ನಲ್ಲಿ ಸ್ಪರ್ಧಿಸಲು ಬಯಸುವ ಸಮರ್ಥ ಕಾರ್ಯಕರ್ತರಿಂದ ಕಾಂಗ್ರೆಸ್ ಪಕ್ಷವು ಅರ್ಜಿ ಆಹ್ವಾನಿಸಿದೆ.

ಅ.24ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುತ್ತದೆ. ಅದೇ ದಿನದಿಂದ ನಾಮಪತ್ರ ಸಲ್ಲಿಕೆಯೂ ಆರಂಭವಾಗಲಿದೆ. ಕಾಂಗ್ರೆಸ್ ಪಕ್ಷವು ಎಲ್ಲ 60 ವಾರ್ಡ್‌ಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಪಕ್ಷದಲ್ಲಿ ಸಕ್ರಿಯರಾಗಿರುವ, ಪಕ್ಷ ಸಂಘಟನೆಗೆ ಹೆಚ್ಚಿನ ಸೇವೆ ಸಲ್ಲಿಸಿರುವ ಮತ್ತು ಗೆಲುವು ಸಾಧಿಸುವ ಶಕ್ತಿ ಹೊಂದಿರುವ ಸಮರ್ಥ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಪಕ್ಷವು ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುವ ಸದಸ್ಯರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಆಸಕ್ತ ಪಕ್ಷದ ಕಾರ್ಯಕರ್ತರು, ಮುಖಂಡರು ಅ.23ರ ಸಂಜೆಯೊಳಗೆ ತಮ್ಮ ಸ್ವವಿವರ ಮತ್ತು ಭಾವಚಿತ್ರ ಇರುವ ಅರ್ಜಿಯನ್ನು ಕದ್ರಿ ಮಲ್ಲಿಕಟ್ಟೆಯಲ್ಲಿರುವ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಗೆ ತಲುಪಿಸುವಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಹರೀಶ್‌ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News