ಮನಮೋಹನ್ ಸಿಂಗ್ ಸಾಮಾನ್ಯ ವ್ಯಕ್ತಿಯಾಗಿ ಪಾಲ್ಗೊಳ್ಳಲು ಬಯಸಿದ್ದಾರೆ: ಪಾಕಿಸ್ತಾನದ ಸಚಿವ

Update: 2019-10-20 15:07 GMT

ಹೊಸದಿಲ್ಲಿ, ಅ.20: ಭಾರತದ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು ನ.9ರಂದು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನರೋವಾಲ್‌ನಲ್ಲಿರುವ ಕರ್ತಾರ್‌ಪುರ ಸಾಹಿಬ್ ಗುರುದ್ವಾರಾ ಕಾರಿಡಾರ್ ಉದ್ಘಾಟನಾ ಸಮಾರಂಭದಲ್ಲಿ ಸಾಮಾನ್ಯ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆಯೇ ಹೊರತು ಮುಖ್ಯ ಅತಿಥಿಯಾಗಿ ಅಲ್ಲ ಎಂದು ಪಾಕ್ ವಿದೇಶಾಂಗ ಸಚಿವ ಶಾ ಮಹಮೂದ್ ಕುರೇಷಿ ಅವರು ಹೇಳಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳನ್ನು ಉಲ್ಲೇಖಿಸಿ ಸುದ್ದಿಸಂಸ್ಥೆಯು ವರದಿ ಮಾಡಿದೆ.

‘ಸಿಂಗ್ ಅವರನ್ನು ನಾನು ಆಹ್ವಾನಿಸಿದ್ದೆ. ತಾನು ಸಾಮಾನ್ಯ ವ್ಯಕ್ತಿಯಾಗಿ ಸಮಾರಂಭದಲ್ಲಿ ಪಾಲ್ಗೊಳ್ಳುತ್ತೇನೆ ಹೊರತು ಮುಖ್ಯ ಅತಿಥಿಯಾಗಿ ಅಲ್ಲ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ. ಅವರು ಸಾಮಾನ್ಯ ವ್ಯಕ್ತಿಯಾಗಿ ಪಾಲ್ಗೊಂಡರೂ ಪಾಕಿಸ್ತಾನವು ಅವರನ್ನು ಸ್ವಾಗತಿಸುತ್ತದೆ ’ಎಂದು ಕುರೇಶಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸಿಂಗ್ ಅವರನ್ನು ಕರ್ತಾರ್‌ಪುರ ಕಾರಿಡಾರ್ ಉದ್ಘಾಟನೆಗೆ ಆಹ್ವಾನಿಸಲು ಪಾಕ್ ಸರಕಾರವು ನಿರ್ಧರಿಸಿದೆ ಎಂದು ಕುರೇಶಿ ಸೆ.30ರಂದು ಮೊದಲ ಬಾರಿಗ ಪ್ರಕಟಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News