ಕಾರ್ಕಳ: ಇಲಿ ಪಾಷಾಣ ಸೇವಿಸಿ ವಿದ್ಯಾರ್ಥಿ ಆತ್ಮಹತ್ಯೆ
Update: 2019-10-20 16:44 GMT
ಕಾರ್ಕಳ, ಅ.20: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಅ.19ರಂದು ಬೆಳಗಿನ ಜಾವ 4.45ರ ಸುಮಾರಿಗೆ ಕಾರ್ಕಳ ಪೆರ್ವಾಜೆ ಎಂಬಲ್ಲಿ ನಡೆದಿದೆ.
ಮೃತರನ್ನು ದಾವಣಗೆರೆ ಮೂಲದ ಬರ್ಮೋಜಿ ಎಂಬವರ ಮಗ ಮನೋಜ್(18) ಎಂದು ಗುರುತಿಸಲಾಗಿದೆ. ಪೆರ್ವಾಜೆಯ ಬಾಡಿಗೆ ಮನೆ ನಿವಾಸಿಯಾಗಿರುವ ಮನೋಜ್, ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದನು.
ಕಾಲೇಜಿಗೆ ಹೋಗಲು ಮನಸ್ಸಿಲ್ಲದ ಕಾರಣ ಜೀವನದಲ್ಲಿ ಜಿಗುಪ್ಸೆಗೊಂಡ ಆತ ಅ.13ರಂದು ಬೆಳಗ್ಗೆ ಮನೆಯಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದನು. ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಆತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟನು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.