ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಕಾಂತಿಶೆಟ್ಟಿ ನೇಮಕ
Update: 2019-10-20 16:58 GMT
ಬೆಂಗಳೂರು, ಅ. 20: ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಸದಸ್ಯರನ್ನಾಗಿ ಬೆಂಗಳೂರಿನ ಕಾಂತಿಶೆಟ್ಟಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಈ ಸಂಬಂಧ ಶನಿವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರಕಾರದ ಅಪರ ಕಾರ್ಯದರ್ಶಿ ಜಿ.ಎಚ್.ಅನಸೂಯಮ್ಮ ಅವರು ಆದೇಶ ಹೊರಡಿಸಿದ್ದಾರೆ.