ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ ಪ್ರಕರಣ: 2ನೇ ಬಾರಿಗೆ ಐಟಿ ಕಚೇರಿಗೆ ಹಾಜರಾದ ಪರಮೇಶ್ವರ್

Update: 2019-10-21 14:11 GMT

ಬೆಂಗಳೂರು, ಅ.21: ಶಿಕ್ಷಣ ಸಂಸ್ಥೆಗಳ ದಾಳಿ ಪ್ರಕರಣ ಸಂಬಂಧ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಎರಡನೇ ಬಾರಿಗೆ ಆದಾಯ ತೆರಿಗೆ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು. ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ ಹಿನ್ನೆಲೆ ವಿಚಾರಣೆಗೆ ಹಾಜರಾಗಿ, ಕೆಲ ದಾಖಲೆ ಪತ್ರಗಳನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಅ.10ರಂದು ಪರಮೇಶ್ವರ್ ಅವರ ಮನೆ ಹಾಗೂ ಶಿಕ್ಷಣ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ದಾಳಿ ನಡೆಸಿತ್ತು. ಸುಮಾರು 25 ಕಡೆ ತಪಾಸಣೆ ನಡೆಸಿ ಐದು ಕೋಟಿಗೂ ಹೆಚ್ಚಿನ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿತ್ತು. ಅದಕ್ಕೆ ಸಂಬಂಧಪಟ್ಟಂತೆ ಆದಾಯ ತೆರಿಗೆ ಇಲಾಖೆ ನೋಟಿಸ್ ಸಮನ್ಸ್ ನೀಡಿತ್ತು ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News