ಕಟಪಾಡಿ: ಸಾರ್ವಜನಿಕ ಸೇವಾ ಕೇಂದ್ರ ಉದ್ಘಾಟನೆ

Update: 2019-10-21 17:27 GMT

ಕಾಪು, ಅ.21: ಕಟಪಾಡಿ ಜಾಮಿಯಾ ಮಸೀದಿಯ ಆಡಳಿತ ಸಮಿತಿ ವತಿಯಿಂದ ಸಾರ್ವಜನಿಕ ಸೇವಾ ಕೇಂದ್ರದ ಉದ್ಘಾಟನೆ ಇತ್ತೀಚೆಗೆ ಮಸೀದಿ ವಠಾರದಲ್ಲಿ ನಡೆಯಿತು.

ಕೇಂದ್ರವನ್ನು ಉದ್ಘಾಟಿಸಿದ ಕಾಪು ತಹಶೀಲ್ದಾರ್ ಮುಹಮ್ಮದ್ ಇಸ್ಹಾಕ್, ದಾಖಲೆ ಪತ್ರಗಳ ಅವಶ್ಯಕತೆ ಮತ್ತು ಅದಕ್ಕೆ ಬೇಕಾದ ಸಂಪೂರ್ಣ ಮಾಹಿತಿ ನೀಡಿದರು. ಮಸೀದಿಯ ಖತೀಬ್ ಬಶೀರ್ ಮದನಿ ದುವಾ ನೆರವೇರಿಸಿದರು.

ಉಡುಪಿ ಜಿಲ್ಲಾ ವಕ್ಫ್ ಸಲಹಾ ಮಂಡಳಿಯ ಅಧ್ಯಕ್ಷ ಕೆ.ಪಿ.ಇಬ್ರಾಹೀಂ ಮಟಪಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಸೀದಿಯ ಆಡಳಿತಾಧಿಕಾರಿ ಮುಹಮ್ಮದ್ ಸಫ್ವಾನ್ ಅಧ್ಯಕ್ಷತೆ ವಹಿಸಿದ್ದರು. ಬಿ.ಮೊಹಿದ್ದೀನ್ ಎ.ಆರ್. ಉಡುಪಿ ಸ್ವಾಗತಿಸಿದರು. ಅಬ್ದುಲ್ ರಝಾಕ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News