ಐಟಿ ದಾಳಿ ಮಾಡಿದರೆ ಯಡಿಯೂರಪ್ಪರಿಗೆ ಸಂಬಂಧಿಸಿದ ದಾಖಲೆಗಳನ್ನು ತೋರಿಸುವೆ: ಕುಮಾರಸ್ವಾಮಿ

Update: 2019-10-22 05:26 GMT

ಹಾಸನ, ಅ.22: ನನ್ನ ಮನೆಗೆ ಐಟಿ ಅಧಿಕಾರಿಗಳು ದಾಳಿ ಮಾಡಲಿ ಎಂದು ಕಾಯುತ್ತಿದ್ದೇನೆ. ನಾನು ಯಾವುದೇ ಲೂಟಿ ಮಾಡಿಲ್ಲ. ಹೀಗಾಗಿ ಧೈರ್ಯವಾಗಿ ಇದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಹಾಸನದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಟಿ ಅಧಿಕಾರಿಗಳು ನನ್ನ ಮನೆಗೆ ಬಂದರೆ ಮುಖ್ಯಮಂತ್ರಿ ಬಿ.ಎಸ್‌ಯಡಿಯೂರಪ್ಪರಿಗೆ ಸಂಬಂಧಿಸಿದ ದಾಖಲೆಗಳನ್ನು ತೋರಿಸುತ್ತೇನೆ ಎಂದರು.

ದೇಶದಲ್ಲಿ ಈಗಾಗಲೇ ತುರ್ತು ಪರಿಸ್ಥಿತಿ ಆರಂಭವಾಗಿದೆ. ಇಂತಹ ಸಂದರ್ಭದಲ್ಲಿ ಎಚ್.ಡಿ.ದೇವೇಗೌಡರು ರಾಷ್ಟ್ರ ರಾಜಕಾರಣಕ್ಕೆ ಮರಳಬೇಕು. ಅವರ ಅಗತ್ಯತೆ ಈಗ ಅನಿವಾರ್ಯವಾಗಿದೆ. ಈ ಬಗ್ಗೆ ದೇವೇಗೌಡರ ಜತೆ ಮಾತುಕತೆ ನಡೆಸುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News