ಬಿಜೆಪಿ ದ್ವೇಷ ರಾಜಕಾರಣ ಮುಂದುವರೆಸಿದೆ: ಪ್ರಿಯಾಂಕ್ ಖರ್ಗೆ

Update: 2019-10-22 14:46 GMT

ಕಲಬುರ್ಗಿ, ಅ.22: ಕಾಂಗ್ರೆಸ್ ಶಾಸಕರು ಇರುವ ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಸರಕಾರ ಅನುದಾನ ಕಡಿತ ಮಾಡುವ ಮೂಲಕ, ದ್ವೇಷ ರಾಜಕಾರಣ ಮುಂದುವರೆಸಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಆರೋಪಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದ್ವೇಷದ ರಾಜಕಾರಣಕ್ಕೆ ಮುಂದಾಗುವುದಿಲ್ಲ ಎಂದು ಹೇಳುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕಲಬುರಗಿ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಗಳಿಗೆ ನೀಡಿದ ಅನುದಾನ ಕಡಿತ ಮಾಡಿದ್ದಾರೆ ಎಂದು ಆಪಾದಿಸಿದರು.

ಬಿಜೆಪಿ ಶಾಸಕರಿರುವ ಕ್ಷೇತ್ರಕ್ಕೆ ಮಾತ್ರ ಅನುದಾನ ಬಿಡುಗಡೆ ಮಾಡಲಾಗಿದೆ. ಆದರೆ, ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಗಳಲ್ಲಿ 400 ಕೋಟಿ ರೂ.ಗೂ ಅಧಿಕ ಮೊತ್ತದ ಅನುದಾನ ಕಡಿತಗೊಳಿಸಲಾಗಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News