×
Ad

ಕೆಪಿಎಲ್ ಬೆಟ್ಟಿಂಗ್: ಬಳ್ಳಾರಿ ಟಸ್ಕರ್ಸ್ ಮಾಲಕ ಅರವಿಂದ್ ವಿಚಾರಣೆ

Update: 2019-10-22 23:44 IST

ಬೆಂಗಳೂರು, ಅ.22: ಕೆಪಿಎಲ್ ಬೆಟ್ಟಿಂಗ್ ಆರೋಪ ಪ್ರಕರಣ ಸಂಬಂಧ ಬಳ್ಳಾರಿ ಟಸ್ಕರ್ಸ್ ತಂಡದ ಮಾಲಕ ಅರವಿಂದ್ ವೆಂಕಟೇಶ್ ರೆಡ್ಡಿ ಅವರನ್ನು ಸಿಸಿಬಿ ಪೊಲೀಸರು ಮಂಗಳವಾರ ವಿಚಾರಣೆ ನಡೆಸಿದರು.

ಈ ಹಿಂದೆ ಬೆಳಗಾವಿ ಪ್ಯಾಂಥರ್ಸ್ ತಂಡದ ಮಾಲಕ ಎ.ಅಲಿ ಅವರನ್ನು ಬಂಧಿಸಲಾಗಿತ್ತು. ಆರೋಪಿ ಜೊತೆ ಸಂಪರ್ಕ ಹೊಂದಿರುವ ಹಾಗೂ ಬೆಟ್ಟಿಂಗ್ ದಂಧೆಯಲ್ಲಿ ಭಾಗಿಯಾಗಿರುವ ಅನುಮಾನದ ಮೇಲೆ ವಿಚಾರಣೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅರವಿಂದ್ ವೆಂಕಟೇಶ್ ರೆಡ್ಡಿ, ಸಿಸಿಬಿ ನೋಟಿಸ್ ನೀಡಿದ ಹಿನ್ನೆಲೆ ವಿಚಾರಣೆಯಲ್ಲಿ ಭಾಗಿಯಾಗಿದ್ದು, ಅಧಿಕಾರಿಗಳಿಗೆ ಲಿಖಿತ ಹೇಳಿಕೆ ನೀಡಿದ್ದೇನೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News