ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವ
Update: 2019-10-23 07:28 GMT
ಬೆಂಗಳೂರು, ಅ.23: ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವವನ್ನು ರಾಣಿ ಚನ್ನಮ್ಮನ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು.
ಈ ಸಂದರ್ಭ ಪಂಚಮಸಾಲಿ ಜಗದ್ಗುರು ಮಹಾಪೀಠದ ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿ, ಮಾಜಿ ಸಚಿವೆ ಹಾಗೂ ಅಕ್ಕಮಹಾದೇವಿ ಟ್ರಸ್ಟ್ ನ ಅಧ್ಯಕ್ಷೆ ಲೀಲಾದೇವಿ ಆರ್. ಪ್ರಸಾದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಆರ್.ಆರ್.ಜನ್ನು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎಸ್.ರಂಗಪ್ಪ ಉಪಸ್ಥಿತರಿದ್ದರು.