ಅ.25ರಂದು ಲಂಡನ್‌ನಲ್ಲಿ ಚಂದ್ರಶೇಖರ ಸ್ವಾಮೀಜಿ ಹುಟ್ಟುಹಬ್ಬ ಆಚರಣೆ: ಸಿಎಂ ಪರಿಹಾರ ನಿಧಿಗೆ 1 ಕೋಟಿ ರೂ. ಘೋಷಣೆ

Update: 2019-10-23 09:49 GMT

ಬೆಂಗಳೂರು, ಅ.23: ರಾಜ್ಯದಲ್ಲಿ ಭಾರೀ ಮಳೆಯಿಂದ ಅಪಾರ ಹಾನಿಯಾಗಿರುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಾಸ್ತುತಜ್ಞ, ವೈಜ್ಞಾನಿಕ ಜ್ಯೋತಿಷಿ ಶ್ರೀಚಂದ್ರಶೇಖರ ಸ್ವಾಮೀಜಿ ಅವರು ತಮ್ಮ ಹುಟ್ಟುಹಬ್ಬವನ್ನು ಸರಳ ರೀತಿಯಲ್ಲಿ ಆಚರಿಸಲು ಉದ್ದೇಶಿಸಿದ್ದು, ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಂದು ಕೋಟಿ ರೂ. ಘೋಷಿಸಿದ್ದಾರೆ.

ರಾಜ್ಯದಲ್ಲಿ ಭಾರೀ ಮಳೆಯಿಂದ ಹಲವು ಮಂದಿ ಮನೆ-ಮಠ ಕಳೆದುಕೊಂಡಿದ್ದಾರೆ. ಕೃಷಿ ಭೂಮಿ ಮಳೆಗೆ ಕೊಚ್ಚಿ ಹೋಗಿದೆ. ಈ ಹಿನ್ನೆಲೆಯಲ್ಲಿ ಅ.25ರಂದು ಚಂದ್ರಶೇಖರ ಸ್ವಾಮೀಜಿ ಅವರು ಹುಟ್ಟುಹಬ್ಬವನ್ನು ಸಾಂಕೇತಿಕ ಹಾಗೂ ಸರಳವಾಗಿ ಲಂಡನ್‌ನ ಬರ್ಮಿಂಗ್‌ಹ್ಯಾಂನ ತಿರುಪತಿ ತಿರುಮಲ ದೇವಸ್ಥಾನದಲ್ಲಿ ವಿಶೇಷ ಪೂಜೆಯ ಮೂಲಕ ಆಚರಿಸಲಿದ್ದಾರೆ. ಇದೇ ವೇಳೆ ಚಂದ್ರಶೇಖರ ಸ್ವಾಮೀಜಿಯ ಅಭಿಮಾನಿ ಸಂಘ ಸಂಸ್ಥೆಯ ವತಿಯಿಂದ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ.

ಚಂದ್ರಶೇಖರ ಸ್ವಾಮೀಜಿ ಸೇವಾ ಟ್ರಸ್ಟ್ ವತಿಯಿಂದ ಲಂಡನ್‌ನ ಸರಕಾರಿ ಆಸ್ಪತ್ರೆಗೆ ಹಣ್ಣು ಹಂಪಲು ವಿತರಣೆ, ವಿಕಲಚೇತನ ಮಕ್ಕಳಿಗೆ ಊಟ, ಉಡುಗೊರೆ, ಅನಾಶ್ರಾಮದ ಮಕ್ಕಳಿಗೆ ಬಟ್ಟೆ, ಪುಸ್ತಕ ದಾನ ನೀಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ವಿಶೇಷ ಗೌರವ ಪುರಸ್ಕಾರ
ಲಂಡನ್‌ನಲ್ಲಿ ಹುಟ್ಟುಹಬ್ಬವನ್ನು ಆಚರಿಸುವ ಚಂದ್ರಶೇಖರ ಸ್ವಾಮೀಜಿ ದಂಪತಿಗಳಿಗೆ ಲಂಡನ್‌ನ ಪಾರ್ಲಿಮೆಂಟ್‌ನಲ್ಲಿ ವಿಶೇಷ ಗೌರವ ಸನ್ಮಾನವನ್ನು ಆಯೋಜಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News