ಮಳೆಯ ಹಿನ್ನೆಲೆ: ದ.ಕ.ಜಿಲ್ಲೆಯಲ್ಲಿ ಅ. 24ರವರೆಗೆ ರೆಡ್ ಅಲರ್ಟ್

Update: 2019-10-23 12:48 GMT

ಮಂಗಳೂರು, ಅ. 23: ಮಳೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಅ. 24ರವರೆಗೆ ರೆಡ್ ಅಲರ್ಟ್ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಅ. 18ರಿಂದ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದರು.

ಆದರೆ ಮಳೆಯಿಂದಾಗಿ 33 ಮನೆಗಳಿಗೆ ಭಾಗಶ: ಹಾನಿಯಾಗಿದ್ದು, 9 ಮನೆಗಳಿಗೆ ತೀವ್ರವಾದ ಹಾನಿಯಾಗಿದೆ. ಮಳೆಗಾಲದ ಅವಧಿಯಲ್ಲಿ ಜಿಲ್ಲೆಯಲ್ಲಿ ಸಂಭವಿಸಿದ ಹಾನಿಗೆ ಸಂಬಂಧಿಸಿ ಘೋಷಿಸಲಾದ ತೀವ್ರ ಹಾನಿಗೆ 5 ಲಕ್ಷ ರೂ.ನಂತೆ ಹಾಗೂ ಭಾಗಶ: ಹಾನಿಗೊಳಗಾದವರಿಗೆ ತಲಾ 50,000 ರೂ.ನಂತೆ ಪರಿಹಾರವನ್ನು ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News