ಉಡುಪಿ ಜಿಲ್ಲೆಯ ವೃದ್ಧಾಶ್ರಮಗಳಿಗೆ ಸೂಚನೆ

Update: 2019-10-23 16:08 GMT

ಉಡುಪಿ, ಅ.23: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೃದ್ಧಾಶ್ರಮಗಳು, ವೃದ್ಧರ ಆಶ್ರಮ, ಮನೆ ಇತ್ಯಾದಿ ಸಂಸ್ಥೆಗಳು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಕಡ್ಡಾಯವಾಗಿ ಮಾನ್ಯತೆಯನ್ನು ಬೇಕಾಗಿದೆ.

ಆದ್ದರಿಂದ ನೋಂದಣಿ ಮಾಡಿ ಮಾನ್ಯತೆ ಪಡೆಯದ ಸಂಸ್ಥೆಗಳು ನ.11ರೊಳಗೆ ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ (ದೂರವಾಣಿ:0820-2574810/2574811) ಇಲ್ಲಿಂದ ಪಡೆದು ಭರ್ತಿ ಮಾಡಿ ಹಿಂದಿರುಗಿಸಿ ಮಾನ್ಯತೆ ಪಡೆದುಕೊಳ್ಳುವಂತೆ ಇಲಾಖಾ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News