ಸ್ಥಳೀಯ ಸಂಸ್ಥೆಗಳ ಚುನಾವಣೆ: ಕಾಂಗ್ರೆಸ್ ವೀಕ್ಷಕರ ನೇಮಕ
ಬೆಂಗಳೂರು, ಅ.23: ನಗರ ಸ್ಥಳೀಯ ಸಂಸ್ಥೆಗಳಾದ ಮಹಾನಗರ ಪಾಲಿಕೆ, ನಗರ ಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್ ಗಳಿಗೆ ನಡೆಯಲಿರುವ ಚುನಾವಣೆಗೆ ಕೆಪಿಸಿಸಿ ವತಿಯಿಂದ ವೀಕ್ಷರನ್ನು ನೇಮಕ ಮಾಡಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಜಿ ಷಫಿಉಲ್ಲಾ ತಿಳಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ: ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ವಿಧಾನಪರಿಷತ್ ಸದಸ್ಯರಾದ ಯು.ಬಿ.ವೆಂಕಟೇಶ್, ಎಂ.ಎ.ಗೋಪಾಲಸ್ವಾಮಿ, ಎಐಸಿಸಿ ಮಾಜಿ ಕಾರ್ಯದರ್ಶಿ ಸೂರಜ್ ಹೆಗ್ಡೆ, ಕೆಪಿಸಿಸಿ ಕಾರ್ಯದರ್ಶಿ ಸವಿತಾ ರಮೇಶ್.
ದಾವಣಗೆರೆ ಮಹಾನಗರ ಪಾಲಿಕೆ: ಶಾಸಕ ಪಿ.ಟಿ.ಪರಮೇಶ್ವರ್ ನಾಯ್ಕ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಲ್ಕೀಸ್ ಬಾನು,
ರಾಮನಗರ ನಗರ ಸಭೆ: ವಿಧಾನಪರಿಷತ್ ಸದಸ್ಯ ಎಸ್.ರವಿ ಹಾಗೂ ಮಾಜಿ ಮೇಯರ್ ಜಿ.ಪದ್ಮಾವತಿ,
ಕೋಲಾರ ನಗರ ಸಭೆ: ವಿಧಾನಪರಿಷತ್ ಮಾಜಿ ಸದಸ್ಯ ಆರ್.ವಿ.ವೆಂಕಟೇಶ್ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಎಂ.ರಾಮಲಿಂಗಯ್ಯ.
ಮುಳಬಾಗಿಲು ನಗರಸಭೆ: ಮಾಜಿ ಸಚಿವೆ ರಾಣಿ ಸತೀಶ್ ಹಾಗೂ ವಿಧಾನಪರಿಷತ್ ಸದಸ್ಯ ಪಿ.ಆರ್.ರಮೇಶ್,
ಕೆಜಿಎಫ್ ನಗರ ಸಭೆ: ಮಾಜಿ ಸಚಿವೆ ಮೋಟಮ್ಮ, ಎ.ಜಯರಾಮ್, ಬಾಲರಾಜ್,
ಗೌರಿಬಿದನೂರು ನಗರಸಭೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಂಜುಳಾ ನಾಯ್ಡು.
ಚಿಂತಾಮಣಿ ನಗರಸಭೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಉದಯಶಂಕರ್ ಹಾಗೂ ಎಂ.ಸುರೇಶ್,
ಮಾಗಡಿ ಪುರಸಭೆ: ಮಾಜಿ ಸಚಿವ ನರೇಂದ್ರಸ್ವಾಮಿ, ಭಾರತಿ ಶಂಕರ್,
ಬೀರೂರು ಪುರಸಭೆ: ವಾಸಂತಿ ಶಿವಣ್ಣ ಹಾಗೂ ಮಾಜಿ ಶಾಸಕ ಪ್ರಸನ್ನ ಕುಮಾರ್,
ಕಂಪ್ಲಿ ಪುರಸಭೆ: ಶಾಸಕ ರಾಘವೇಂದ್ರ ಹಿಟ್ನಾಳ್ ಹಾಗೂ ಮಾಜಿ ಶಾಸಕ ಹಸನ್ಸಾಬ್ ಧೋತಿಹಾಳ್.
ಕುಂದಗೋಳ ತಾಲೂಕು ಪಂಚಾಯತ್: ಶಾಸಕ ಪ್ರಸಾದ್ ಅಬ್ಬಯ್ಯ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಪ್ರಕಾಶ್ಗೌಡ ಪಾಟೀಲ್,
ಜೋಗ್ ಕಾರ್ಗಲ್ ತಾಲೂಕು ಪಂಚಾಯತ್: ಎಚ್.ಕೆ.ಮಹೇಶ್,
ಕೂಡ್ಲಿಗಿ ತಾಲೂಕು ಪಂಚಾಯತ್: ಹನುಮಂತೇಗೌಡ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಗೋವಿಂದಸ್ವಾಮಿಯನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.