ಮಹಾ ಮಳೆಗೆ ರಾಜ್ಯ ತತ್ತರ...

Update: 2019-10-23 18:18 GMT

ಎರಡು ತಿಂಗಳ ಹಿಂದೆಯಷ್ಟೇ ಭೀಕರ ಪ್ರವಾಹದಿಂದಾಗಿ ಉತ್ತರ ಕರ್ನಾಟಕ ಇನ್ನೂ ಚೇತರಿಸಿಕೊಳ್ಳಲಾಗದ ಸ್ಥಿತಿಯಲ್ಲಿರುವಾಗಲೇ, ಇದೀಗ ಮತ್ತೆ ಧಾರಾಕಾರವಾಗಿ ಸುರಿಯುತ್ತಿರುವ ಮಹಾಮಳೆಯಿಂದ ಇಡೀ ಕರ್ನಾಟಕ ತತ್ತರಿಸಿ ಹೋಗಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು, ಸೇತುವೆಗಳು ಮುಳುಗಡೆಯಾಗಿವೆ. ರಾಜ್ಯದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮನೆಗಳು ಕುಸಿದಿವೆ. ರೈತರ ಕೈಗೆ ಬರುವ ಹೊತ್ತಿನಲ್ಲಿದ್ದ ಬೆಳೆ ಸಂಪೂರ್ಣ ನೆಲಕಚ್ಚಿಹೋಗಿದೆ. ದಿಕ್ಕುಗಾಣದ ಸ್ಥಿತಿಗೆ ರೈತರು ತಲುಪಿದ್ದಾರೆ. ಬೆಳೆಗಳು ಜಲಾವೃತವಾಗಿದ್ದು, ಕೋಟ್ಯಂತರ ರೂ.ಗಳಷ್ಟು ನಷ್ಟವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor