ಚಂಡಮಾರುತ: ನೂರಾರು ಮೀನುಗಾರಿಕಾ ಬೋಟ್‌ಗಳಿಗೆ ಎನ್‌ಎಂಪಿಟಿಯಲ್ಲಿ ರಕ್ಷಣೆ

Update: 2019-10-26 04:21 GMT

ಮಂಗಳೂರು, ಅ.26: ಭಾರತದ ಪಶ್ಚಿಮ ಕರಾವಳಿಯಲ್ಲಿ ಹವಾಮಾನ ವೈಪರೀತ್ಯ ಉಂಟಾಗಿರುವುದರಿಂದ ಮೀನುಗಾರಿಕೆಯಲ್ಲಿ ತೊಡಗಿದ್ದ 100ಕ್ಕೂ ಅಧಿಕ ಬೋಟುಗಳಿಗೆ ನವಮಂಗಳೂರು ಬಂದರ್(ಎನ್‌ಎಂಪಿಟಿ)ನಲ್ಲಿ ರಕ್ಷಣೆ ಒದಗಿಸಲಾಗಿದೆ.

ಅರಬಿ ಸಮುದ್ರದಲ್ಲಿನ ತೀವ್ರ ವಾಯುಭಾರ ಕುಸಿತವು ಕ್ಯಾರ್ ಚಂಡಮಾರುತವಾಗಿ ರೂಪುಗೊಂಡಿದೆ. ಈ ಹಿನ್ನೆಲೆಯಲ್ಲಿ ಭಾರತದ ಪಶ್ಚಿಮ ಕರಾವಳಿಯಲ್ಲಿ ಸಮುದ್ರ ಪ್ರಕ್ಷುಬ್ಧಗೊಂಡಿದೆ. ಈ ಹಿನ್ನೆಲೆಯಲ್ಲಿ ಮೀನುಗಾರಿಕೆಯಲ್ಲಿ ತೊಡಗಿದ್ದ ನೂರಾರು ಬೋಟ್‌ಗಳಿಗೆ ಕೋಸ್ಟ್ ಗಾರ್ಡ್ ಸಹಕಾರದಲ್ಲಿ ಎನ್‌ಎಂಪಿಟಿಯಲ್ಲಿ ಆಶ್ರಯ ಒದಗಿಸಲಾಗಿದೆ. ಮೀನುಗಾರಿಕಾ ಬೋಟ್‌ಗಳಲ್ಲಿದ್ದ ಸಾವಿರಕ್ಕೂ ಅಧಿಕ ಮೀನುಗಾರರನ್ನು ರಕ್ಷಿಸಲಾಗಿದ್ದು, ಅವರಿಗೆ ಬಂದರ್‌ನ ಸುರಕ್ಷಿತ ವಲಯದಲ್ಲಿ ಆಶ್ರಯ ಕಲ್ಪಿಸಲಾಗಿದೆ ಎಂದು ಎನ್‌ಎಂಪಿಟಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News