ಸಿಆರ್ ಪಿಎಫ್ ತಂಡದ ಮೇಲೆ ಉಗ್ರರಿಂದ ಗ್ರೆನೇಡ್ ದಾಳಿ: 6 ಮಂದಿಗೆ ಗಾಯ

Update: 2019-10-26 18:09 GMT

ಶ್ರೀನಗರ,ಅ.26: ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿಯ ಕಾಕಾಸರಾಯ್ ಪ್ರದೇಶದ ಕರಣನಗರದಲ್ಲಿ ಶನಿವಾರ ಸಂಜೆ ಭಯೋತ್ಪಾದಕರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಆರು ಸಿಆರ್ ಪಿಎಫ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ.

ಸಿಆರ್ ಪಿಎಫ್ ಸಿಬ್ಬಂದಿಗಳು ಎಸ್ಎಂಎಚ್ಎಸ್ ಆಸ್ಪತ್ರೆಯ ಹೊರಗೆ ನಾಕಾಬಂದಿ ಕರ್ತವ್ಯದಲ್ಲಿದ್ದಾಗ ಈ ದಾಳಿ ನಡೆದಿದೆ. ಓರ್ವ ಹೆಡ್ ಕಾನ್ಸ್ಟೇಬಲ್ ಗಂಭೀರವಾಗಿ ಗಾಯಗೊಂಡಿದ್ದು,ಎಲ್ಲ ಗಾಯಾಳುಗಳನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರದೇಶವನ್ನು ನಿರ್ಬಂಧಿಸಲಾಗಿದ್ದು, ಭಯೋತ್ಪಾದಕರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಜಮ್ಮು-ಕಾಶ್ಮೀರ ಮತ್ತು ಲಡಾಖ್ನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಲು ಕೆಲವೇ ದಿನಗಳು ಬಾಕಿಯಿರುವಾಗಿ ಈ ದಾಳಿ ನಡೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News