×
Ad

ಗುಂಡ್ಲುಪೇಟೆ: ಕುರಿ ಬಲಿ ತೆಗೆದುಕೊಂಡಿದ್ದ ಚಿರತೆ ಬೋನಿಗೆ

Update: 2019-10-26 22:05 IST

ಚಾಮರಾಜನಗರ, ಅ.26: ಕುರಿ ಬಲಿ ತೆಗೆದುಕೊಂಡಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬನ್ನಿತಾಳಪುರದಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬನ್ನಿತಾಳಪುರದಲ್ಲಿ ಚಿರತೆ ಸೆರೆಯಾಗಿದೆ.

ಶುಕ್ರವಾರ ಬೆಳಗ್ಗೆ ಬನ್ನಿತಾಳಪುರದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಚಿರತೆ ಸೆರೆಗೆ ಅರಣ್ಯಾಧಿಕಾರಿಗಳು ಬೋನು ಇಟ್ಟಿದ್ದರು. ಇಂದು ಆಹಾರ ಅರಸಿ ಬಂದ ಚಿರತೆ ಬೋನ್ ನಲ್ಲಿ ಸೆರೆಯಾಗಿದ್ದು, ಬಳಿಕ ಚಿರತೆಯನ್ನು ಕಾಡಿಗೆ ಬಿಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News