ಸರ್ವಾಧಿಕಾರಿ ರೀತಿಯ ಹೇಳಿಕೆಗೆ ಪ್ರತಿಕ್ರಿಯಿಸಲಾರೆ: ಸಿಎಂ ಯಡಿಯೂರಪ್ಪ

Update: 2019-10-28 15:26 GMT

ಬೆಂಗಳೂರು, ಅ. 28: ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸರ್ವಾಧಿಕಾರಿ ರೀತಿಯಲ್ಲಿ ನೀಡುತ್ತಿರುವ ಹೇಳಿಕೆಗಳಿಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರಾಕರಿಸಿದ್ದಾರೆ.

ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮನಸೋ ಇಚ್ಛೆ ಮಾತನಾಡುತ್ತಿದ್ದು, ಅವರೇನು ಮಾತನಾಡುತ್ತಿದ್ದಾರೆ ಎಂದು ಅವರಿಗೇ ಗೊತ್ತಾಗುತ್ತಿಲ್ಲ. ಪಕ್ಷದಲ್ಲೆ ಅವರು ಇಂತಹ ಹೇಳಿಕೆಗಳ ಮೂಲಕ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ತಾವೇ ಎಲ್ಲ ಜವಾಬ್ದಾರಿ ಹೊತ್ತಿರುವವರಂತೆ ಸಿದ್ದರಾಮಯ್ಯ ಮಾತಾಡ್ತಿದ್ದಾರೆ. ಸಿದ್ದರಾಮಯ್ಯರ ನಡವಳಿಕೆಯ ಬಗ್ಗೆ ಕಾಂಗ್ರೆಸ್ ಪಕ್ಷದ ಮುಖಂಡರಿಗೇ ಅಸಮಾಧಾನ ಇದೆ. ರಾಜ್ಯದ ಜನತೆ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಬಿಎಸ್‌ವೈ ಪ್ರತಿಕ್ರಿಯೆ ನೀಡಿದರು.

ಎಚ್‌ಡಿಕೆಗೆ ಅಭಿನಂದೆ: ರಾಜ್ಯ ಸರಕಾರ ಉತ್ತಮ ಕೆಲಸ ಮಾಡಿದೆ ಎಂಬ ಭಾವನೆ ಕುಮಾರಸ್ವಾಮಿ ಅವರಿಗೆ. ಹೀಗಾಗಿಯೇ ಅವರು ಬಿಜೆಪಿ ಸರಕಾರ ಉರುಳಲು ಬೀಡುವುದಿಲ್ಲ ಎಂದು ಹೇಳಿದ್ದಾರೆ. ಸರಕಾರವೂ ಅತಿವೃಷ್ಟಿ ಸೇರಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದೆ.
ಉತ್ತಮವಾಗಿ ನಡೆಯುತ್ತಿರುವ ಸರಕಾರಕ್ಕೆ ತೊಂದರೆ ಮಾಡುವುದು ಬೇಡ ಎಂದು ಕುಮಾರಸ್ವಾಮಿ ಬಿಜೆಪಿ ಸರಕಾರಕ್ಕೆ ಬೆಂಬಲ ನೀಡಿದ್ದಾರೆ. ಹೀಗಾಗಿ ಅವರನ್ನು ನಾನು ಅಭಿನಂದಿಸುತ್ತೇನೆ ಎಂದು ಯಡಿಯೂರಪ್ಪ ಇದೇ ಸಂದರ್ಭದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News