ಇಂಜಿನಿಯರ್ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಪ್ರಾಂಶುಪಾಲ ಸೇರಿ ಹಲವರ ವಿರುದ್ಧ ಎಫ್‌ಐಆರ್

Update: 2019-10-28 15:37 GMT

ಬೆಂಗಳೂರು, ಅ.28: ಅಮೃತ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಆರೋಪ ಪ್ರಕರಣ ಸಂಬಂಧ ಪ್ರಾಂಶುಪಾಲ ಸೇರಿ 10 ಜನರ ವಿರುದ್ಧ ಇಲ್ಲಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.

ಕಾಲೇಜಿನ ಪ್ರಾಂಶುಪಾಲ ಧನ್‌ರಾಜ್ ಸ್ವಾಮಿ, ಸೇರಿದಂತೆ 10 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಶಿಕ್ಷಕರು ಸಾಕ್ಷ ನಾಶ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಕಾಲೇಜಿನಲ್ಲಿ ವಿದ್ಯುತ್ ಹಾಗೂ ವಸತಿ ಗೃಹದ ಆಹಾರ ಸರಿ ಇಲ್ಲ ಎಂದು ಕಾಲೇಜು ವಿದ್ಯಾರ್ಥಿಗಳು ಕಾಲೇಜು ಆಡಳಿತ ಮಂಡಳಿ ವಿರುದ್ದ ಪತ್ರಿಭಟನೆ ನಡೆಸಿದ್ದರು. ಹೀಗಾಗಿ, 40 ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿತ್ತು. 40 ವಿದ್ಯಾರ್ಥಿಗಳ ಪೈಕಿ ಹರ್ಷ ಸಹ ಒಬ್ಬ ವಿದ್ಯಾರ್ಥಿ ಎನ್ನಲಾಗಿದ್ದು, ಇದರಿಂದ ಮನನೊಂದು ಹರ್ಷ ಕಾಲೇಜಿನ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.
ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಠಾಣಾ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News