ಹನೂರು: ಬೈಕ್‍ಗಳ ನಡುವೆ ಮುಖಾಮುಖಿ ಢಿಕ್ಕಿ; ಓರ್ವ ಮೃತ್ಯು

Update: 2019-10-28 16:30 GMT

ಹನೂರು: ಹನೂರು ಸಮೀಪದ ಮಂಗಲ ಗ್ರಾಮದ ಹೂರ ವಲಯದಲ್ಲಿ ಎರಡು ಬೈಕ್‍ಗಳ ನಡುವೆ ಮುಖಾಮುಖಿ ಢಿಕ್ಕಿ ಹೂಡೆದ ಪರಿಣಾಮ ಓರ್ವ ಮೃತಪಟ್ಟರೆ ಮೂವರಿಗೆ ಗಂಬೀರ ಗಾಯಗಳಾಗಿರುವ ಘಟನೆ ವರದಿಯಾಗಿದೆ. 

ಕೂಳ್ಳೇಗಾಲ ತಾಲ್ಲೂಕಿನ ಕಾಮಗೆರೆ ಗ್ರಾಮದ ಸಚಿನ್ ಎಂಬಾತನೆ ಮೃತಪಟ್ಟವರು.  ಸಹ ಸವಾರ ವಿಕಾಸ್ ಎಂಬವರಿಗೆ ಗಂಬೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಮತ್ತೊಂದು ಬೈಕ್‍ನಲ್ಲಿದ್ದ ಮಂಡ್ಯ ಜಿಲ್ಲೆಯ ಚಿರನಹಳ್ಳಿಯ ಗ್ರಾಮದ ತೇಜು ಮತ್ತು ಆತನ ಸ್ನೇಹಿತನಿಗೂ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ  ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತೇಜು ಮತ್ತು ಆತನ ಸ್ನೇಹಿತ ದೀಪಾವಳಿ ಹಬ್ಬದ ಪ್ರಯುಕ್ತ ಮಂಡ್ಯದಿಂದ ಮಲೈಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ಹಿಂದುರಿಗುತ್ತಿದ್ದಾಗ ಈ ಅವಘಡ ನಡೆದಿದೆ.

ಈ ಸಂಬಂಧ ಹನೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೋಲಿಸರು ಮುಂದಿನ ಕ್ರಮಕೈಗೂಂಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News