ಡಿ.ಕೆ.ಶಿವಕುಮಾರ್ ರನ್ನು ಭೇಟಿಯಾಗಿ ಅನರ್ಹ ಶಾಸಕ ನಾರಾಯಣಗೌಡ ಹೇಳಿದ್ದೇನು ?

Update: 2019-10-29 14:03 GMT

ಬೆಂಗಳೂರು, ಅ.29: ಕುಮಾರಸ್ವಾಮಿ ಇವತ್ತು ಒಂದು, ನಾಳೆಗೊಂದು ಹೇಳಿಕೆ ನೀಡುತ್ತಾರೆ. ಅವರ ಹೇಳಿಕೆಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಜೆಡಿಎಸ್ ಪಕ್ಷದ ಅನರ್ಹ ಶಾಸಕ ನಾರಾಯಣಗೌಡ ಹೇಳಿದರು.

ಮಂಗಳವಾರ ಇಲ್ಲಿನ ಸದಾಶಿವನಗರದಲ್ಲಿರುವ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರ ನಿವಾಸದಲ್ಲಿ ಭೇಟಿ ಮಾಡಿ, ಚರ್ಚೆ ನಡೆಸಿದ ಬಳಿಕ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ನಾರಾಯಣ ಗೌಡ, ರಾಜಕೀಯ ಹೊರತಾಗಿ ಕಳೆದ 20 ವರ್ಷಗಳಿಂದ ನಾನು ಮತ್ತು ಡಿ.ಕೆ.ಶಿವಕುಮಾರ್ ಆಪ್ತ ಸ್ನೇಹಿತರು. ಕಾಂಗ್ರೆಸ್ ಸರಕಾರವಿದ್ದಾಗ ನನ್ನ ಕ್ಷೇತ್ರದ ಅಭಿವೃದ್ಧಿಗೆ ಶಿವಕುಮಾರ್ ಸಹಾಯ ಮಾಡಿದ್ದರು. ಜೈಲಿಗೆ ಹೋದ ಬಳಿಕ ಅವರನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಇಂದು ಭೇಟಿಯಾದೆ ಎಂದರು.

ಬಿಜೆಪಿ ಸರಕಾರ ಬೀಳಿಸಲ್ಲ ಎಂಬ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಇವತ್ತು ಒಂದು, ನಾಳೆಗೊಂದು ಹೇಳಿಕೆ ನೀಡುತ್ತಾರೆ. ಅವರ ಹೇಳಿಕೆಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News