ತುಳು ರಂಗಭೂಮಿ ಕಲಾವಿದ ಪರ್ತಿಪ್ಪಾಡಿ ಸುರೇಶ್ ರೈ ನಿಧನ

Update: 2019-10-30 14:19 GMT

ವಿಟ್ಲ, ಅ. 30: ತುಳು ರಂಗಭೂಮಿ ಕಲಾವಿದ, ರಾಜ್ಯ ಪ್ರಶಸ್ತಿ ವಿಜೇತ ಪರ್ತಿಪ್ಪಾಡಿ ಸುರೇಶ್ ರೈ(47) ಮಂಗಳವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 

ಸುರೇಶ್ ರೈ ಸುಮಾರು 25 ವರ್ಷಗಳಿಂದ ತುಳು ರಂಗಭೂಮಿಯಲ್ಲಿ ಕಲಾವಿದನಾಗಿ ಅಪಾರ ಅಭಿಮಾನಿಗಳನ್ನು ಹೊಂದಿದ್ದರು. 'ಭೈರನ ಬದುಕು' ನಾಟಕದಲ್ಲಿ ಖಳನಾಯಕನ ಪಾತ್ರ ಮಾಡಿದ್ದ ರೈಗೆ ರಾಜ್ಯಪ್ರಶಸ್ತಿ ಲಭಿಸಿತ್ತು. ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿದ್ದ ರೈ, ಮಂಕುಡೆ ಹಳೆವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರಾಗಿದ್ದರು. ಎರಡು ದಿನಗಳ ಹಿಂದಷ್ಟೇ ಆಸ್ಪತ್ರೆಗೆ ದಾಖಲಾಗಿದ್ದ ಸುರೇಶ್ ರೈ ಮಂಗಳವಾರ ರಾತ್ರಿ ಚಿಕೆತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರು ತಾಯಿ, ಇಬ್ಬರು ಸಹೋದರರು, ಓರ್ವ ಸಹೋದರಿ, ಪತ್ನಿ ಮತ್ತು ಇಬ್ಬರು ಪುತ್ರರನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News