ಮೆಟ್ರೋ ಕಾಮಗಾರಿ: ಪರ್ಯಾಯ ಮಾರ್ಗಕ್ಕೆ ಒತ್ತಾಯಿಸಿ ಧರಣಿ

Update: 2019-10-30 18:17 GMT

ಬೆಂಗಳೂರು, ಅ.30: ಡೈರಿ ಸರ್ಕಲ್‌ನಿಂದ ಬನ್ನೇರುಘಟ್ಟ ಮಾರ್ಗದ ಮೆಟ್ರೋ ಕಾಮಗಾರಿ ನಡೆಯುತ್ತಿರುವುದರಿಂದ ಪರ್ಯಾಯ ಮಾರ್ಗವನ್ನು ಕಲ್ಪಿಸುವಂತೆ ಒತ್ತಾಯಿಸಿ ಬಹುಜನ ಮಹಾಸಭಾ ಸದಸ್ಯರು ಬುಧವಾರ ಧರಣಿ ನಡೆಸಿದರು.

ಡೈರಿ ಸರ್ಕಲ್‌ನಿಂದ ಬನ್ನೇರುಘಟ್ಟ ಮಾರ್ಗದಲ್ಲಿ ಸಂಚರಿಸುವ ಸಾರ್ವಜನಿಕ ಪಾದಚಾರಿಗಳಿಗೆ ಮತ್ತು ವಾಹನ ಸವಾರರಿಗೆ ಮೆಟ್ರೋ ಕಾಮಗಾರಿಯಿಂದ ತೀವ್ರ ತೊಂದರೆ ಆಗುತ್ತಿದ್ದು, ಪರ್ಯಾಯ ಮಾರ್ಗವನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮೆಟ್ರೋ ಕಾಮಗಾರಿ ಪ್ರಾರಂಭಕ್ಕೂ ಮುಂಚಿತವಾಗಿ ಜನರ ಸುರಕ್ಷತೆ ದೃಷ್ಟಿಯಿಂದ ಪರ್ಯಾಯ ಮಾರ್ಗ ಕಲ್ಪಿಸಿ ನಂತರ ಕಾಮಗಾರಿ ನಡೆಸಬೇಕಿತ್ತು. ಆದರೆ ಬಿಎಂಆರ್‌ಸಿಎಲ್ ಇದ್ಯಾವುದನ್ನು ಪಾಲಿಸಿಲ್ಲ ಎಂದು ಆರೋಪಿಸಿದ ಪ್ರತಿಭಟನಾಕಾರರು ಈ ಕೂಡಲೇ ಪರ್ಯಾಯ ಮಾರ್ಗ ಕಲ್ಪಿಸುವಂತೆ ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News