ಭೀಕರ ಬಸ್ ಅಪಘಾತ: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲು ಜಿ.ಪರಮೇಶ್ವರ್ ಒತ್ತಾಯ

Update: 2019-10-30 18:37 GMT

ಕೊರಟಗೆರೆ, ಅ.30: ಇಂದು ಕೊರಟಗೆರೆ ಪಟ್ಟಣದ ಸಮೀಪ ಜಟ್ಟಿ ಅಗ್ರಹಾರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ ಸರಕಾರ 5 ಲಕ್ಷ ರು. ಪರಿಹಾರ ಘೋಷಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಒತ್ತಾಯಿಸಿದರು.

ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಅಪಾಘತದಿಂದ ಗಾಯಗೊಂಡವರ ಆರೋಗ್ಯ ವಿಚಾರಿಸಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು. ಮಧುಗಿರಿಯಿಂದ ತುಮಕೂರಿಗೆ ಹೊರಟ ಬಸ್‌ ಮಾರ್ಗ ಮಧ್ಯೆ ಜಟ್ಟಿ ಅಗ್ರಹಾರದಲ್ಲಿ ಭೀಕರ ಅಪಘಾತಕ್ಕೆ ಒಳಗಾಗಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. 15ಕ್ಕೂ ಹೆಚ್ಚು ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರ ಕುಟುಂಬಕ್ಕೆ ಸರಕಾರ 5 ಲಕ್ಷ ರೂ. ಪರಿಹಾರ ಘೋಷಿಸಲಿ ಎಂದರು.

ಈ ಮಾರ್ಗದಲ್ಲಿ ಇದು ಎರಡನೇ ಅಪಘಾತವಾಗಿದೆ. ಬಸ್‌ಗಳ ವೇಗಕ್ಕೆ ಕಡಿವಾಣ ಹಾಕಬೇಕಿದೆ. ಈ ನಿಟ್ಟಿನಲ್ಲಿ ಆರ್‌ಟಿಒ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿ, ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಆರ್‌ಟಿಒ ಅವರು ಖಾಸಗಿ ಬಸ್‌ ಮಾಲೀಕರ ಜೊತೆ ಶಾಮೀಲಾಗಿದ್ದರೆ ಕೂಡಲೇ ಡಿಸಿ ಈ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಬೇಕು. ಈ ಸಂಬಂಧ ಸಾರಿಗೆ ಸಚಿವರೊಂದಿಗೆ ಮಾತನಾಡುವೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News