ಯೆಯ್ಯಾಡಿಯಲ್ಲಿ ಕಾಲೇಜು ಬಸ್, ಕಾರು, ಲಾರಿ ನಡುವೆ ಸರಣಿ ಅಪಘಾತ

Update: 2019-10-31 04:35 GMT

ಮಂಗಳೂರು, ಅ.31 ಯೆಯ್ಯಾಡಿ ಸಮೀಪ ಕಾರು, ಕಾಲೇಜು ಬಸ್ ಹಾಗೂ ಮರಳು ಸಾಗಾಟದ ಲಾರಿ ನಡುವೆ ಗುರುವಾರ ಬೆಳಗ್ಗೆ ಸರಣಿ ಅಪಘಾತ ಸಂಭವಿಸಿದೆ

ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದುಬಂದಿದೆ.

ಮಂಗಳೂರಿನಿಂದ ಪದವಿನಂಗಡಿಗೆ ಹೋಗುತ್ತಿದ್ದ ಕಾರಿಗೆ ಮರಳು ಸಾಗಾಟದ ಲಾರಿಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಎದುರಿದ್ದ ಕಾಲೇಜು ಬಸ್ಸಿಗೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಸರಣಿ ಅಪಘಾತದಲ್ಲಿ ಮೂರೂ ವಾಹನಗಳು ಜಖಂಗೊಂಡಿದ್ದು, ಕಾರಿಗೆ ಹೆಚ್ಚು ಹಾನಿ ಸಂಭವಿಸಿದೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News