ನೆರೆ ಪರಿಹಾರ ಕಾರ್ಯಕ್ಕೆ ಅವಧಿ ವಿಸ್ತರಣೆ

Update: 2019-10-31 17:44 GMT

ಬೆಂಗಳೂರು, ಅ.31: ರಾಜ್ಯದಲ್ಲಿ 2019ರ ಆಗಸ್ಟ್‌ನಲ್ಲಿ ಸಂಭವಿಸಿದ ಪ್ರವಾಹ ಪರಿಸ್ಥಿತಿಯಿಂದ ಬಾಧಿತ ಪ್ರದೇಶಗಳ ಸಂತ್ರಸ್ತರ ಪರಿಹಾರ ಕಾರ್ಯಗಳನ್ನು ಸೆಪ್ಟೆಂಬರ್, ಅಕ್ಟೋಬರ್‌ವರೆಗೂ ವಿಸ್ತರಿಸಲು ಸೂಚಿಸಲಾಗಿದೆ.

22 ಜಿಲ್ಲೆಗಳ 103 ತಾಲೂಕುಗಳನ್ನು ಪ್ರವಾಸ ಪೀಡಿತ ಪ್ರದೇಶಗಳೆಂದು ಸರಕಾರದಿಂದ ಘೋಷಿಸಿ ಕಾಲ ಕಾಲಕ್ಕೆ ಪರಿಹಾರ ಕಾರ್ಯಗಳಿಗೆ ಸರಕಾರದ ಆದೇಶವನ್ನು ಹೊರಡಿಸಲಾಗಿದ್ದು, ಇದರೊಂದಿಗೆ 2019ರ ಸೆಪ್ಟೆಂಬರ್ ಮತ್ತು ಅಕ್ಟೋಬರ್‌ನಲ್ಲಿ ಸಂಭವಿಸಿದ ಅತಿವೃಷ್ಟಿಗೂ ಪರಿಹಾರ ಕಾರ್ಯಗಳಿಗೆ, ಸದರಿ ಆದೇಶಗಳಲ್ಲಿನ ನಿರ್ದೇಶನಗಳನ್ನು ಮುಂದುವರೆಸಲು ಆದೇಶ ಹೊರಡಿಸಲಾಗಿದೆ.

ವಸತಿಗಳಿಗೆ ಸಂಬಂಧಿಸಿದ ಪರಿಹಾರ ಕಾರ್ಯಗಳನ್ನು (RGRHCL) ತಂತ್ರಾಂಶಗಳ ಅನುಸಾರವೇ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News