ಅಜ್ಜಂಪುರ: ಬಸ್ ಉರುಳಿ ಮಗು ಮೃತ್ಯು, ಹಲವರಿಗೆ ಗಾಯ

Update: 2019-11-01 04:43 GMT

ಚಿಕ್ಕಮಗಳೂರು, ನ.1: ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ತೆರಳುತ್ತಿದ್ದ ಸರಕಾರಿ ಬಸ್ಸೊಂದು ಚಾಲಕನ ನಿರ್ಲಕ್ಷದಿಂದ ಉರುಳಿಬಿದ್ದ ಪರಿಣಾಮ ಮಗುವೊಂದು ಮೃತಪಟ್ಟು, ಹಲವರು ಗಾಯಗೊಂಡ ಘಟನೆ ಅಜ್ಜಂಪುರ ತಾಲೂಕಿನ ಕಾಟಿಗನಗೆರೆ ಬಳಿ ಶುಕ್ರವಾರ ನಸುಕಿನ ಜಾವ ಗಂಟೆ ಸುಮಾರಿಗೆ ನಡೆದಿದೆ.

ಸುಹಾಸ್ ಎಂಬ ಒಂದೂವರೆ ವರ್ಷದ ಮಗು ಮೃತಪಟ್ಟಿದೆ.

ಬಸ್ ಚಾಲಕ ನಿದ್ದೆಗೆ ಜಾರಿದ ಹಿನ್ನೆಲೆಯಲ್ಲಿ ಬಸ್ ನಿರ್ವಾಹಕ ಬಸ್ ಚಲಾಯಿಸುತ್ತಿದ್ದ ಎಂದು ಹೇಳಲಾಗಿದೆ. ಈ ವೇಳೆ ನಿರ್ವಾಹಕನ ನಿಯಂತ್ರಣ ತಪ್ಪಿದ ಬಸ್ ಉರುಳಿಬಿದ್ದಿದೆ. ಇದರಿಂದ ಗಂಭೀರ ಗಾಯಗೊಂಡ ಮಗು ಸುಹಾಸ್ ಸ್ಥಳದಲ್ಲೇ ಕೊನೆಯುಸಿರೆಳೆದಿದೆ. ಹಲವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಅಜ್ಜಂಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News