ಕನ್ನಡ ಬಾವುಟ ಹಾರಿಸಬೇಡಿ ಎಂದ ಪ್ರಹ್ಲಾದ್ ಜೋಶಿ ಕಚೇರಿಯಲ್ಲಿ ನಾಡ ಧ್ವಜ ಹಾರಿಸಿದ ಕರವೇ ಕಾರ್ಯಕರ್ತರು
Update: 2019-11-01 15:20 GMT
ಧಾರವಾಡ, ನ.1: ಕನ್ನಡ ರಾಜ್ಯೋತ್ಸವ ಹಿನ್ನೆಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕಚೇರಿ ಮೇಲೆ ಕನ್ನಡ ಪರ ಕಾರ್ಯಕರ್ತರು, ನಾಡ ಧ್ವಜ ಹಾರಿಸಿದ್ದಾರೆ.
ಶುಕ್ರವಾರ ಇಲ್ಲಿನ ಪ್ರಹ್ಲಾದ್ ಜೋಶಿ ಅವರ ಕಚೇರಿ ಮುಂಭಾಗ ಕರ್ನಾಟಕ ರಕ್ಷಣಾ ವೇದಿಕೆಯ ಅಮೃತ್ ಇಜಾರಿ ನೇತೃತ್ವದಲ್ಲಿ ಜಮಾಯಿಸಿದ ಕಾರ್ಯಕರ್ತರು, ನಾಡ ಧ್ವಜ ಹಾರಿಸಿ, ರಾಜ್ಯೋತ್ಸವದ ಶುಭಾಷಯ ಕೋರಿದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಕನ್ನಡ ರಾಜ್ಯೋತ್ಸವದಲ್ಲಿ ಕನ್ನಡ ಬಾವುಟ ಹಾರಿಸಬೇಡಿ ಎಂದು ವಿವಾದಿತ ಹೇಳಿಕೆ ನೀಡಿದ್ದ ಹಿನ್ನೆಲೆ ಅವರ ಕಚೇರಿಯಲ್ಲಿಯೇ ಕನ್ನಡ ಬಾವುಟ ಹಾರಿಸಲಾಗಿದೆ ಎಂದು ಕಾರ್ಯಕರ್ತರು ಹೇಳಿದರು.