ದೋಣಿ ಮಗುಚಿ ಓರ್ವ ನೀರುಪಾಲು

Update: 2019-11-01 16:46 GMT

ಗಂಗೊಳ್ಳಿ, ನ.1: ಗುಜ್ಜಾಡಿ ಗ್ರಾಮದ ಕಳಿಹಿತ್ತಲು ಎಂಬಲ್ಲಿರುವ ಸೌಪರ್ಣಿಕ ಹೊಳೆಯಲ್ಲಿ ಮೀನು ಹಿಡಿಯುತ್ತಿದ್ದ ವ್ಯಕ್ತಿಯೊಬ್ಬರು ದೋಣಿ ಮಗುಚಿ ನೀರಿಗೆ ಬಿದ್ದು ನಾಪತ್ತೆಯಾಗಿರುವ ಘಟನೆ ನ.1ರಂದು ಬೆಳಗ್ಗೆ ವರದಿಯಾಗಿದೆ.

ಸ್ಥಳೀಯ ನಿವಾಸಿ ಡೇವಿಡ್ ಕರ್ವಾಲೊ(43) ಎಂಬವರು ದೋಣಿಯಲ್ಲಿ ಬಲೆ ಮತ್ತು ಗಾಳ ಹಾಕಿ ಮೀನು ಹಿಡಿಯಲು ಹೋಗಿದ್ದು, ಈ ವೇಳೆ ದೋಣಿ ಮಗುಚಿ ಬಿದ್ದ ಪರಿಣಾಮ ಅವರು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News