ಸಕಲ ಸರಕಾರಿ ಗೌರವಗಳೊಂದಿಗೆ ವೈಜನಾಥ್ ಪಾಟೀಲ್ ಅಂತ್ಯಕ್ರಿಯೆ

Update: 2019-11-03 15:27 GMT

ಬೆಂಗಳೂರು, ನ.3: ಅನಾರೋಗ್ಯದಿಂದ ಶನಿವಾರ ನಿಧನರಾದ ಮಾಜಿ ಸಚಿವ ವೈಜನಾಥ್ ಪಾಟೀಲ್ ಅವರ ಅಂತ್ಯಕ್ರಿಯೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪಟ್ಟಣದ ಅವರ ತೋಟದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿತು.

ಮಧ್ಯಾಹ್ನ 2 ಗಂಟೆಯ ವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಂತ್ಯಕ್ರಿಯೆ ವೇಳೆಯಲ್ಲಿ ಪೊಲೀಸ್ ಸಿಬ್ಬಂದಿ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಸರಕಾರಿ ಗೌರವ ಸಲ್ಲಿಸಿದರು. ವೀರಶೈವ ಲಿಂಗಾಯತ ವಿಧಿ-ವಿಧಾನದ ಪ್ರಕಾರ, ಮೂರು ಸಾವಿರಕ್ಕೂ ಹೆಚ್ಚು ವಿಭೂತಿ, ಬಿಲ್ವಪತ್ರೆ, ಉಪ್ಪುನ್ನು ಬಳಸಿ ಅಂತಿಮ ಸಂಸ್ಕಾರ ಮಾಡಲಾಯಿತು.

ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಸಂಸದರಾದ ಉಮೇಶ್ ಜಾಧವ್, ಭಗವಂತ ಖೂಬಾ ಸೇರಿ ಹಲವು ಗಣ್ಯರು, ವಿವಿಧ ಮಠಗಳ ಸ್ವಾಮೀಜಿಗಳು, ಕುಟಂಬಸ್ಥರು, ಸಾರ್ವಜನಿಕರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News