ಆಪರೇಶನ್ ಕಮಲ: ಆಡಿಯೋ ಸಾಕ್ಷಿಯಾಗಿ ಪರಿಗಣಿಸಲು ಸುಪ್ರೀಂಗೆ ಕಾಂಗ್ರೆಸ್ ಅರ್ಜಿ

Update: 2019-11-04 06:52 GMT

ಹೊಸದಿಲ್ಲಿ, ನ.4: ಕರ್ನಾಟಕದಲ್ಲಿ ನಡೆದಿದೆ ಎನ್ನಲಾದ ಆಪರೇಶನ್ ಕಮಲಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಡಿಯೋವನ್ನು ಸಾಕ್ಷಿಯಾಗಿ ಪರಿಗಣಿಸಲು ಸೋಮವಾರ ಸುಪ್ರೀಂ ಕೋರ್ಟ್ ಗೆ ಕಾಂಗ್ರೆಸ್ ಅರ್ಜಿ ಸಲ್ಲಿಸಿದೆ.

ನ್ಯಾಯಮೂರ್ತಿ ರಮಣ್ ಪೀಠದ ಮುಂದೆ ಕಾಂಗ್ರೆಸ್ ಪರ ವಕೀಲ ಕಪಿಲ್ ಸಿಬಲ್ ಆಡಿಯೋವನ್ನು ಸಲ್ಲಿಸಿ ಇದರ ವಿಚಾರಣೆಗೆ ಪ್ರತ್ಯೇಕ ಪೀಠ ರಚನೆ ಮಾಡುವಂತೆ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದರು.

"ಕೋರ್ಟ್ ತೀರ್ಪು ಕಾಯ್ದಿರಿಸಿದ ಬಳಿಕ ನಮಗೆ ಮಹತ್ವದ ಸಾಕ್ಷಿ ಸಿಕ್ಕಿದೆ. ದಯವಿಟ್ಟು ಇದನ್ನು ಪರಿಗಣಿಸಬೇಕು" ಎಂದು ಅವರು ಹೇಳಿದರು. ಮುಖ್ಯ ನ್ಯಾಯಮೂರ್ತಿ ಒಪ್ಪಿದರೆ ಮಂಗಳವಾರ ಸುಪ್ರೀಂ ಕೋರ್ಟ್  ವಿಚಾರಣೆ ನಡೆಯಲಿದೆ ಎಂದು ನ್ಯಾಯಮೂರ್ತಿ ರಮಣ್ ಹೇಳಿದರು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News