ಹಿರಿಯಡಕ: ವಿಸ್ತರಿತ ಕಟ್ಟಡಕ್ಕೆ ಶಂಕುಸ್ಥಾಪನೆ

Update: 2019-11-04 17:00 GMT

ಹಿರಿಯಡಕ: ವಿಸ್ತರಿತ ಕಟ್ಟಡಕ್ಕೆ ಶಂಕುಸ್ಥಾಪನೆ ಉಡುಪಿ, ನ.4: ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ, ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿಸ್ತೃತ ಕಟ್ಟಡಕ್ಕಾಗಿ ಮಂಜೂರಾದ 80 ಲಕ್ಷ ರೂ. ಅನುದಾನದ ಕಾಮಗಾರಿಯ ಶಂಕುಸ್ಥಾಪನಾ ಕಾರ್ಯಕ್ರಮವನ್ನು ಸೋಮವಾರ ಕಾಪು ಶಾಸಕ ಲಾಲಾಜಿ ಆರ್.ಮೆಂಡನ್ ನೆರವೇರಿಸಿದರು.

ಕಾಲೇಜಿನ ಪ್ರಾಂಶುಪಾಲೆ ಡಾ.ನಿಕೇತನ, ಬೊಮ್ಮರಬೆಟ್ಟು ಗ್ರಾಪಂ ಅಧ್ಯಕ್ಷೆ ಸವಿತಾ ನಾಯಕ್, ಉಪಾಧ್ಯಕ್ಷ ಹರೀಶ್ ಸಾಲ್ಯಾನ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಡಾ.ಎನ್.ಎಸ್. ಶೆಟ್ಟಿ, ದಯಾನಂದ ಮಲ್ಯ, ಉಮೇಶ್ ಶೆಟ್ಟಿ, ಮುರಳೀಧರ ಹಾಲಂಬಿ, ಮಾಧವ ನಾಯ್ಕಿ ಉಪಸ್ಥಿತರಿದ್ದರು.

ಸಮಾಜಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಸುಮನಾ ಬಿ. ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News