ಮಂಡ್ಯ: ಸರಕಾರ ವಜಾ, ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಧರಣಿ

Update: 2019-11-04 17:17 GMT

ಮಂಡ್ಯ, ನ.4: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ಹಾಗೂ ರಾಜ್ಯ ಬಿಜೆಪಿ ಸರಕಾರ ವಜಾಗೊಳಿಸಲು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರವನ್ನು ಬೀಳಿಸಲು ಯಡಿಯೂರಪ್ಪ ಮತ್ತು ಅಮಿತ್ ಶಾ ಕಾರಣವೆಂಬುದು ಯಡಿಯೂರಪ್ಪ ಅವರ ಆಡಿಯೋದಿಂದ ಬಹಿರಂಗವಾಗಿದೆ ಎಂದು ಅವರು ಆರೋಪಿಸಿದರು. ಆಪರೇಷನ್ ಕಮಲ ನಡೆಸುವ ಮೂಲಕ ಸಂವಿಧಾನದ ಆಶಯವನ್ನು ಬುಡಮೇಲು ಮಾಡಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಸರಕಾರ ವಜಾಗೊಳಿಸಬೇಕು. ಇದರಲ್ಲಿ ಭಾಗಿಯಾಗಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಮಹಿಳಾಧ್ಯಕ್ಷೆ ಅಂಜನಾ ಶ್ರೀಕಾಂತ್, ನಗರಾಧ್ಯಕ್ಷ ರುದ್ರಪ್ಪ, ಮೈಷುಗರ್ ಮಾಜಿ ಅಧ್ಯಕ್ಷ ರಾಮಲಿಂಗೇಗೌಡ, ನಗರಸಭಾ ಸದಸ್ಯ ರಾಮಲಿಂಗಯ್ಯ, ಎಂ.ಎಸ್.ಚಿದಂಬರ್, ಸಿ.ಎಂ.ದ್ಯಾವಪ್ಪ, ಚಿಕ್ಕಮಂಚಯ್ಯ, ವಿಜಯಲಕ್ಷಿö್ಮ ರಘುನಂದನ್, ಪೂರ್ಣಿಮಾ, ಶ್ರೀಧರ್, ಚಂದ್ರು, ಚನ್ನಪ್ಪ, ಇತರ ಮುಖಂಡರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News