ಜನರೆದುರು ನಿಮ್ಮ ಕಪಟತನ, ಅನೈತಿಕ ರಾಜಕಾರಣ ಬಯಲಾಗಿದೆ: ಬಿಜೆಪಿ ವಿರುದ್ಧ ಕಾಂಗ್ರೆಸ್ ಟೀಕೆ
Update: 2019-11-05 12:07 GMT
ಬೆಂಗಳೂರು, ನ.5: ಆಡಿಯೋ ಟೇಪ್ ಜೊತೆಗೆ ಬಿಜೆಪಿಯ ಸಂಚು ಬಹಿರಂಗವಾಗುತ್ತಿದ್ದಂತೆ ಕೂಗುಮಾರಿ ಬಿಜೆಪಿ ನಾಯಕರು, ‘ಸಂತೆಯಲ್ಲಿ ಬೆತ್ತಲಾದ ಕಳ್ಳನ’ ರೀತಿ ಚಡಪಡಿಕೆಯ ಚೀರಾಟ ಮಾಡುತ್ತಿದ್ದಾರೆ. ನೀವೆಷ್ಟೇ ಸುಳ್ಳುಗಳು ಹೇಳಿದರೂ ಮಾನ ಮುಚ್ಚುವ ಬಟ್ಟೆಯಾಗಲಾರದು. ರಾಜ್ಯದ ಜನತೆ ಎದುರು ನಿಮ್ಮ ಅಧಿಕಾರ ಲಾಲಸೆ, ಕಪಟತನ, ಅನೈತಿಕ ರಾಜಕಾರಣ ಬಯಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿ ಟೀಕಿಸಿದೆ.