ರೈತರ ಸಭೆಯಲ್ಲಿ ಸಚಿವ ಸುರೇಶ್ ಕುಮಾರ್ ಗೆ ತಟ್ಟಿದ ಪ್ರತಿಭಟನೆಯ ಬಿಸಿ

Update: 2019-11-05 18:37 GMT

ಚಾಮರಾಜನಗರ, ನ,5: ರೈತರು ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ಸಂಜೆ ಚಾಮರಾಜನಗರದಲ್ಲಿ ನಡೆಯಿತು.

ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ರೈತರ ಸಮಸ್ಯೆಗಳ ಬಗ್ಗೆ ಕರೆದಿದ್ದ ಸಭೆಯಲ್ಲಿ ರೈತರಿಂದಲೇ ಪ್ರತಿಭಟನೆ ಎದುರಿಸಬೇಕಾಯಿತು. ಮೂರು ಗಂಟೆಗೆ ಕರೆದ ಸಭೆ ನಾಲ್ಕು ಗಂಟೆಯಾದರೂ ಸಭೆ‌ ಆರಂಭವಾಗದೇ ಇರುವುದನ್ನು ಕಂಡ ರೈತರು ಜಿಲ್ಲಾಡಳಿತ ಹಾಗೂ ಉಸ್ತುವಾರಿ ಸಚಿವರ ವಿರುದ್ದ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ವಿರುದ್ಧ ರೈತರು ಕಿಡಿಕಾರಿದ್ದು, ಜಿಲ್ಲಾಧಿಕಾರಿ ಮತ್ತು ಅಧಿಕಾರಿಗಳು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗಡಿಜಿಲ್ಲೆಯಲ್ಲಿ ರೈತರ ಸಮಸ್ಯೆ ಜ್ವಲಂತ ಸಮಸ್ಯೆಯಿದ್ದು, ಸಮಸ್ಯೆ ಬಗೆಹರಿಸಲು ಸರಕಾರ ವಿಫಲವಾಗಿದೆ. ಕೆರೆಗಳಿಗೆ ನೀರು ತುಂಬಿಸಿಲ್ಲ ಎಂದು‌ ಆರೋಪಿಸಿ ಪ್ರತಿಭಟನೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News