×
Ad

ನ.10: ಪುತ್ತೂರಿನಲ್ಲಿ ಮಿಲಾದ್ ಸಮಾವೇಶ, ಕಾಲ್ನಡಿಗೆ ಜಾಥಾ

Update: 2019-11-06 18:15 IST

ಪುತ್ತೂರು: ದ.ಕ.ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಮತ್ತು ಪುತ್ತೂರು ತಾಲೂಕು ಈದ್ ಮಿಲಾದ್ ಸಮಿತಿ ವತಿಯಿಂದ ಪ್ರವಾದಿ ಮಹಮ್ಮದ್ ಪೈಗಂಬರರ ಜನ್ಮದಿನ ಪ್ರಯುಕ್ತ ನ. 10ರಂದು ಪುತ್ತೂರಿನಲ್ಲಿ ಬೃಹತ್ ಮಿಲಾದ್ ಸಮಾವೇಶ ಹಾಗೂ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಪುತ್ತೂರು ಈದ್ ಮಿಲಾದ್ ಸಮಿತಿ ಅಧ್ಯಕ್ಷ ಶಾಕಿರ್ ಹಾಜಿ ತಿಳಿಸಿದ್ದಾರೆ.

ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ  ನ.10ರಂದು ಸಂಜೆ ಪುತ್ತೂರು ನಗರದ ದರ್ಬೆ ವೃತ್ತದ ಬಳಿಯಿಂದ ಕಿಲ್ಲೆ ಮೈದಾನದ ತನಕ ದಫ್ ತಂಡದೊ0ದಿಗೆ ಮಿಲಾದ್ ಕಾಲ್ನಡಿಗೆ ಜಾಥಾ ನಡೆಯಲಿದೆ. ಪುತ್ತೂರು ತಾಲೂಕು ಮುಸ್ಲಿಂ ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಎಸ್. ಇಬ್ರಾಹಿಂ ಕಮ್ಮಾಡಿ ಅವರು ದ.ಕ. ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಸಂಚಾಲಕರಾದ ಜ. ಖಾಸಿಂ ಹಾಜಿ ಮಿತ್ತೂರು ಅವರಿಗೆ ಧ್ವಜ ಹಸ್ತಾಂತರಿಸುವ ಮೂಲಕ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ.

ಬಳಿಕ ಮಿಲಾದ್ ಸಮಾವೇಶ ಸಭಾ ಕಾರ್ಯಕ್ರಮ ನಡೆಯಲಿದೆ. ಪುತ್ತೂರು ಕೇಂದ್ರ ಜುಮ್ಮಾ ಮಸೀದಿಯ ಮರ‍್ರಿಸ್ ಅಸ್ಸಯ್ಯದ್ ಪೂಕೋಯ ತಂಙಳ್ ದುವಾಶೀರ್ವಚನ ನೀಡಲಿದ್ದಾರೆ. ಇಬ್ರಾಹಿಂ ಖಲೀಲ್ ಹುದವಿ ಅಲ್ ಮಾಲಿಕಿ ಕಾಸರಗೋಡು ಉದ್ಘಾಟಿಸಲಿದ್ದಾರೆ. ಮರ್ಕಝಸ್ಸಖಾಫಿ ಸುನ್ನಿಯಾ ಕೇರಳ ಇದರ ನಿರ್ದೇಶಕ ಡಾ.ಎಪಿ.ಅಬ್ದುಲ್ ಹಕೀಂ ಅಝ್‌ಹರಿ ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಪುತ್ತೂರಿನ ಹಿರಿಯ ಉದ್ಯಮಿ ಜ. ಪಿ.ಬಿ. ಹಸನ್ ಹಾಜಿ ಯುನಿಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲೆಯ ಪ್ರಮುಖ ಉಲಮಾ, ಉಮರಾ ನಾಯಕರು, ಗಣ್ಯರು, ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. 

 ಮಿಲಾದ್ ಪ್ರಯುಕ್ತ ಉಭಯ ಸಂಘಟನೆಗಳ ವತಿಯಿಂದ ನ.9ರಂದು ಬೆಳಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ದ.ಕ. ಜಿಲ್ಲಾ ಮುಸ್ಲಿಂ ಯುವಜನ ಪರಿಷತ್‌ನ ರಾಜ್ಯ ಸಂಚಾಲಕ ನ್ಯಾಯವಾದಿ ಎಂ.ಪಿ. ಅಬೂಬಕ್ಕರ್, ಜಿಲ್ಲಾ ಉಪಾಧ್ಯಕ್ಷ ಹಾಜಿ ಇಬ್ರಾಹಿಂ ಸಾಗರ್, ಪುತ್ತೂರು ತಾಲೂಕು ಈದ್ ಮಿಲಾದ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪಿ.ಎಂ. ಅಶ್ರಫ್ ಮುಕ್ವೆ, ಕೋಶಾಧಿಕಾರಿ ಅಶ್ರಫ್ ಬಾವಾ ಪಡೀಲ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News